ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಮಹಿಳಾ ಘಟಕದಿಂದ ಮಹಿಳಾ ದಿನಾಚರಣೆ

ದಾವಣಗೆರೆ, ಮಾ. 29- ನಗರದ ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಮಹಿಳಾ ಘಟಕದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ನಗರದ ಪಿ.ಜೆ. ಬಡಾವಣೆಯ ಚೇತನ ಹೋಟೆಲ್ ರಸ್ತೆಯಲ್ಲಿರುವ ಪಂಚಮಸಾಲಿ ಸಮಾಜದ ಕಚೇರಿಯಲ್ಲಿ ಆಚರಿಸಲಾಯಿತು.

ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ರಶ್ಮಿ ನಾಗರಾಜ್ ಕುಂಕೋದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಮುಖ್ಯ ಅತಿಥಿಗಳಾಗಿ ಈ ವರ್ಷದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಶ್ರೀಮತಿ ಕಂಚಿಕೇರಿ ಸುಶೀಲಮ್ಮ, ಡಾ. ಪುಷ್ಪಲತಾ ಭಾಗವಹಿಸಿದ್ದರು.

ಮಹಿಳಾ ದಿನಾಚರಣೆ ಅಂಗವಾಗಿ ಕೋವಿಡ್ 19  ವಿರುದ್ಧ ಹೋರಾಡುತ್ತಿರುವ ಜಿಲ್ಲಾ ಆಸ್ಪತ್ರೆಯ ಹೆಡ್ ನರ್ಸ್‍ಗಳಾದ ಶ್ರೀಮತಿ ಉಮಾ ಹಾಗೂ ಶ್ರೀಮತಿ ಪುಷ್ಪ ವಾಲಿ ಇವರುಗಳಿಗೆ ಸನ್ಮಾನಿಸಲಾಯಿತು. 

ಈ ಸಂದರ್ಭದಲ್ಲಿ ಸಮಾಜದ ಹಿರಿಯ  ಮುಖಂಡರಾದ ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಮುಂಡಾಸ್ ಸರೋಜಮ್ಮ,  ಶ್ರೀಮತಿ ವಾಣಿ ಗುರು ಮತ್ತು ಜಿಲ್ಲಾ ಘಟಕದ ಕಾರ್ಯದರ್ಶಿಗಳಾದ ಶ್ರೀಮತಿ ವೀಣಾ ಕೊಟ್ರೇಶ್, ನಗರ ಘಟಕದ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ಶಿವಲಿಂಗಪ್ಪ ವೇದಿಕೆ ಮೇಲೆ ಉಪಸ್ಥಿತರಿದ್ದರು.

ಶ್ರೀಮತಿ ವೀಣಾ ನಟರಾಜ್ ಬೆಳ್ಳೂಡಿ, ಶ್ರೀಮತಿ ಉಮಾ ಸೋಮಶೇಖರ್  ನಿರೂಪಿಸಿದರು. ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಮತಿ ಶೈಲಾ ಪ್ರಾರ್ಥಿಸಿದರು. ಶ್ರೀಮತಿ ಸುಮ ಪಾಟೀಲ್,  ಶ್ರೀಮತಿ ರಶ್ಮಿ ನಾಗರಾಜ್ ಕಾರ್ಯಕ್ರಮದ ವಿವಿಧ ಹಂತಗಳಲ್ಲಿ ಕಾರ್ಯ ನಿರ್ವಹಿಸಿದರು.

error: Content is protected !!