ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಷರತ್ತು ಬದ್ಧ ಅನುಮತಿ

ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿ ನಾಲ್ಕು ಅಡಿ, ಮನೆಯೊಳಗೆ ಕೂರಿಸುವ ಮೂರ್ತಿ ಎರಡು ಅಡಿ ಮೀರುವಂತಿಲ್ಲ. 

– ಮಹಾಂತೇಶ್ ಬೀಳಗಿ, ಜಿಲ್ಲಾಧಿಕಾರಿ

ದಾವಣಗೆರೆ, ಸೆ.6 – ಗಣೇಶೋತ್ಸವ ಆಚರ ಣೆಗೆ ಸರ್ಕಾರ ಷರತ್ತು ಬದ್ಧ ಅನುಮತಿ ಮಾತ್ರ ನೀಡಿದ್ದು, ಅದರಂತೆ ಜಿಲ್ಲೆಯಲ್ಲಿಯೂ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ, ಸಾರ್ವಜನಿಕವಾಗಿ ಅಥವಾ ಮನೆಗಳಲ್ಲಿ ಗಣೇಶೋತ್ಸವ ಆಚರಿಸಲು ಅವಕಾಶ ನೀಡ ಲಾಗುವುದು.  ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ವಿವಿಧ ಇಲಾಖೆಗಳಿಂದ ಪಡೆಯಲಾಗುವ ಅನುಮತಿಯನ್ನು ಒಂದೇ ಕಡೆ ಒದಗಿಸಲು ಏಕಗವಾಕ್ಷಿ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಇಂದು ನಡೆಸಿದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಾರ್ವಜನಿಕವಾಗಿ ಕೂರಿಸಲಾಗುವ ಗಣೇಶಮೂರ್ತಿಯನ್ನು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಸಂಖ್ಯೆಯಲ್ಲಿ ಪ್ರತಿಷ್ಠಾಪನೆ ಮಾಡಬೇಕು.  2-3 ವಾರ್ಡ್‍ನವರು ಸೇರಿ, ಒಂದೆಡೆ ಪ್ರತಿಷ್ಠಾಪಿಸಿ ಆಚರಿಸುವುದು ಸೂಕ್ತ.  ಸರ್ಕಾರದ ಸೂಚನೆಯಂತೆ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಆಚರಣೆ ಮಾಡುವ ಆಯೋಜಕರು, ಕೋವಿಡ್ 19 ರ ಆರ್‍ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಮತ್ತು ಕನಿಷ್ಟ 1 ಡೋಸ್ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯವಾಗಿದೆ.  ಗಣೇಶೋತ್ಸವವನ್ನು 5 ದಿನಕ್ಕಿಂತ ಹೆಚ್ಚು ಆಚರಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ.  ಸಾರ್ವಜನಿಕವಾಗಿ ಗಣೇಶಮೂರ್ತಿ ಪ್ರತಿಷ್ಠಾ ಪಿಸುವ ಸ್ಥಳಗಳಲ್ಲಿ ಗರಿಷ್ಟ 20 ಜನಕ್ಕೆ ಸೀಮಿತವಾಗುವ ರೀತಿ ಆವರಣ ನಿರ್ಮಿಸ ಬೇಕು. ದರ್ಶನ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪ್ರತಿ ವ್ಯಕ್ತಿಗೆ ಬಣ್ಣ ದಿಂದ ಬಾಕ್ಸ್ ಗುರುತಿಸಬೇಕು. ಸಾರ್ವಜನಿ ಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತಿರಬೇಕು. ಈ ಬಾರಿ ಗಣೇ ಶೋತ್ಸವ ಆಚರಣೆ ಅಂಗವಾಗಿ ಯಾವುದೇ ಬಗೆಯ ಸಾಂಸ್ಕೃತಿಕ, ಸಂಗೀತ, ನೃತ್ಯ ಕಾರ್ಯಕ್ರಮ, ಡಿಜೆ ಸಹಿತ ಮನೋರಂಜನೆ ಕಾರ್ಯಕ್ರಮ ಆಯೋಜನೆಗೆ ಅವಕಾಶ ಇರುವುದಿಲ್ಲ.  ಗಣೇಶ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವ ಸಂದರ್ಭಗಳಲ್ಲಿ ಮೆರವಣಿಗೆ ಹೊರಡಿಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಈ ಬಾರಿ ಅರಿಶಿನ ಗಣಪ ಮೂರ್ತಿ ಪ್ರತಿಷ್ಠಾಪಿಸಲು ಅಭಿಯಾನ ಕೈಗೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಅರಿಶಿನ ಗಣಪನನ್ನು ಪ್ರತಿಷ್ಠಾಪಿಸಿ, ಫೋಟೋ ವಿಡಿಯೋವನ್ನು ಇಲಾಖೆಯ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

30 ಕಡೆ ಗಣೇಶ ವಿಸರ್ಜನೆಗೆ ವ್ಯವಸ್ಥೆ : ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶಮೂರ್ತಿ ವಿಸರ್ಜನೆಗೆ ಒಟ್ಟು 30 ಕಡೆಗಳಲ್ಲಿ ಸ್ಥಳ ಗುರುತಿಸಲಾಗಿದ್ದು, ಇಲ್ಲಿ ಪಾಲಿಕೆಯಿಂದ ನೀರಿನ ಟ್ಯಾಂಕ್ ಸಹಿತದ ಟ್ಯಾಂಕರ್ ವ್ಯವಸ್ಥೆ ಮಾಡಲಾಗುವುದು. 

ಶಿರಮಗೊಂಡನಹಳ್ಳಿ, ಬಾತಿ ಕೆರೆ ಬಳಿಯೂ ಕೃತಕ ಟ್ಯಾಂಕ್ ನಿರ್ಮಿಸಿ ಗಣೇಶಮೂರ್ತಿ ವಿಸರ್ಜನೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದರು. 

ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಮತ್ತಿತರರು ಭಾಗವಹಿಸಿದ್ದರು.

error: Content is protected !!