42ನೇ ವಾರ್ಡಿನಲ್ಲಿ ಕಾಂಗ್ರೆಸ್ ನೋಂದಣಿ ಅಭಿಯಾನಕ್ಕೆ ಚಾಲನೆ

ದಾವಣಗೆರೆ, ಡಿ.12 – ನಗರ ಪಾಲಿಕೆಯ 42 ನೇ ವಾರ್ಡ್‍ನಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಜಿಲ್ಲಾ ಕಾಂಗ್ರೆಸ್ ವಕ್ತಾರ ಶಾಮ ನೂರು ಟಿ.ಬಸವರಾಜ್ ಸದಸ್ಯತ್ವ ಪಡೆಯುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ  ಪಾಲಿಕೆಯ ಮಾಜಿ ಉಪ ಮೇಯರ್ ಗೌಡ್ರ ರಾಜಶೇಖರ್, ಪಾಲಿಕೆ ಮಾಜಿ ಸದಸ್ಯ ಜಿ.ಬಿ.ಲಿಂಗರಾಜ್, ಉತ್ತರ ವಿಧಾನಸಭಾ ಎಸ್ಸಿ ಘಟಕದ ಅಧ್ಯಕ್ಷ ರಂಗನಾಥ ಸ್ವಾಮಿ, ಮಹಿಳಾ ಕಾಂಗ್ರೆಸ್‍ನ ದ್ರಾಕ್ಷಾಯಣಮ್ಮ, ರಾಜೇಶ್ವರಿ ಮುಖಂಡರಾದ ನಾಗರಾಜ್, ಬೇತೂರ್ ನರೇಂದ್ರ, ಬಸಣ್ಣ, ವಿರೋಜಿ ರಾವ್, ಸಿದ್ದೇಶ್, ಮಂಜುನಾಥ್ ಮುಂತಾದವರು ಪಾಲ್ಗೊಂಡಿದ್ದರು.

error: Content is protected !!