ಬಿಜೆಪಿಯ ಅರುಣ್ ಗೆಲುವು ಹೊನ್ನಾಳಿಯಲ್ಲಿ ಸಂಭ್ರಮ

ಹೊನ್ನಾಳಿ, ಡಿ. 14- ಹೊನ್ನಾಳಿ, ಚನ್ನಗಿರಿ,  ನ್ಯಾಮತಿ ತಾಲ್ಲೂಕುಗಳನ್ನು ಒಳಗೊಂಡ ಶಿವಮೊಗ್ಗ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಜಯಶಾಲಿಯಾದ ಹಿನ್ನೆಲೆಯಲ್ಲಿ, ಬಿಜೆಪಿ ಮುಖಂಡರು, ಕಾರ್ಯಕರ್ತರು, ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್ ಮಾತ ನಾಡಿ, ವಿಧಾನ ಪರಿಷತ್ ಚುನಾವಣೆ ಯಲ್ಲಿನ ಬಿಜೆಪಿ ಅಭ್ಯರ್ಥಿಗಳ ಅಭೂತ ಪೂರ್ವ ಗೆಲುವು, ಮುಂದಿನ ವಿಧಾನ ಸಭೆ ಚುನಾವಣೆಯ ದಿಕ್ಸೂಚಿಯಾಗ ಲಿದೆ ಎಂದು ಹೇಳಿದರು.

ಪುರಸಭೆ ಅಧ್ಯಕ್ಷ ಬಾಬು ಹೋಬಳದಾರ್ ಮಾತನಾಡಿ, ಬಿಜೆಪಿ ಯುವ ನಾಯಕ ಅರುಣ್ ಅವರನ್ನು ಗೆಲ್ಲಿಸುವ ಮೂಲಕ ಮತದಾರರು ಪ್ರಬುದ್ಧತೆ ಮೆರೆದಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷರಾದ ರಂಜಿತಾ ಚನ್ನಪ್ಪ ವಡ್ಡಿ, ಸದಸ್ಯ ರಂಗಪ್ಪ, ಜಿ.ಪಂ. ಮಾಜಿ ಸದಸ್ಯ ಎಂ.ಆರ್. ಮಹೇಶ್, ಮುಖಂಡರಾದ ಅರಕೆರೆ ನಾಗರಾಜ್, ಶಾಂತರಾಜ್ ಪಾಟೀಲ್, ಚಂದ್ರ (ಗುಂಡ), ಸಂತೋಷ್, ಪ್ರೇಮ್‌ಕುಮಾರ್ ಬಂಡಿಗಡಿ, ಜುಂಜಾನಾಯ್ಕ ಉಪಸ್ಥಿತರಿದ್ದರು.

error: Content is protected !!