ವಿಧಾನ ಪರಿಷತ್ ಸದಸ್ಯ ನವೀನ್‌ರಿಂದ ಶಾಮನೂರು ಆಂಜನೇಯ ಸ್ವಾಮಿಗೆ ಪೂಜೆ

ದಾವಣಗೆರೆ, ಡಿ.17- ವಿಧಾನ ಪರಿಷತ್ ಚುನಾವಣೆಯಲ್ಲಿ ಜಯ ಗಳಿಸಿರುವ ಕೆ.ಎಸ್. ನವೀನ್ ಅವರು ಶಾಮನೂರಿನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಿನ್ನೆ ವಿಶೇಷ ಪೂಜೆ ಸಲ್ಲಿಸಿದರು. ನಗರ ಪಾಲಿಕೆ ಮಾಜಿ ಸದಸ್ಯ ಸಂಕೋಳ್ ಚಂದ್ರಶೇಖರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹನಗವಾಡಿ ವೀರೇಶ್, ಬಿ.ಎಸ್. ಜಗದೀಶ್, ಜಿ.ಎಸ್. ಅನಿತ್, ಎಂ. ರಾಜಪ್ಪ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

error: Content is protected !!