ಕ್ರೀಡಾ ಪ್ರೋತ್ಸಾಹ ನೀಡುತ್ತಿರುವ ಎಸ್ಸೆಸ್ಸೆಂ

ರಾಜ್ಯ ಸ್ಟ್ರೆಂಥ್ ಲಿಫ್ಟಿಂಗ್, ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ಉದ್ಘಾಟನೆಯಲ್ಲಿ ದಿನೇಶ್ ಕೆ.ಶೆಟ್ಟಿ ಶ್ಲ್ಯಾಘನೆ

ದಾವಣಗೆರೆ, ಡಿ.19- ಶಾಮನೂರು ಮಲ್ಲಿಕಾರ್ಜುನ್ ಕ್ರೀಡಾ ಸಚಿವರಾಗಿದ್ದ ವೇಳೆ ಕ್ರೀಡೆಗಳಿಗೆ ನೀಡಿದ ಪ್ರೋತ್ಸಾಹ ಸುವರ್ಣ ಅಕ್ಷರಗಳಲ್ಲಿ ಬರೆದಿಡು ವಂತಹದ್ದು ಎಂದು ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ತಿಳಿಸಿದರು.

ಕರ್ನಾಟಕ ರಾಜ್ಯ ಸ್ಟ್ರೆಂಥ್ ಲಿಫ್ಟಿಂಗ್ ಅಸೋಸಿಯೇಷನ್ ವತಿಯಿಂದ ವಿನೋಬನಗರದ ಶ್ರೀ ಸಿದ್ದಿವಿನಾಯಕ ಸಾಂಸ್ಕೃತಿಕ ಸಂಘದ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಸ್ಟ್ರೆಂಥ್ ಲಿಫ್ಟಿಂಗ್, ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ನಗರದಲ್ಲಿ ಬಹುತೇಕ ಕ್ರೀಡೆಗಳಿಗೆ ತರಬೇತು ದಾರರನ್ನು ನೇಮಿಸಿದ್ದರು. ಅಂದಿನಿಂದ ಇಂದಿನವರೆಗೂ ಅನೇಕ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುತ್ತಾ ಬಂದಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಸದಸ್ಯ ಆರ್.ಶಿವಾನಂದ ಮಾತನಾಡಿದರು.

ಕರ್ನಾಟಕ ರಾಜ್ಯ ಸ್ಟ್ರೆಂಥ್ ಲಿಫ್ಟಿಂಗ್ ಅಸೋಸಿ ಯೇಷನ್ ಅಧ್ಯಕ್ಷ ಕೆ.ಧರ್ಮರಾಜ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಕ್ರೀಡಾಪಟು ಶ್ರೀಮತಿ ಲಕ್ಷ್ಮೀದೇವಿ ದಯಾನಂದ್ ಮತ್ತಿತರರಿದ್ದರು.

error: Content is protected !!