ಕಾಂಗ್ರೆಸ್ ಸದಸ್ಯತ್ವ ಪಡೆದು ದೇಶ ರಕ್ಷಿಸಿ

ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಯುವಕರಿಗೆ ಎಸ್ಸೆಸ್ಸೆಂ ಕರೆ

ದಾವಣಗೆರೆ, ಡಿ.19- ಇಂದು ದೇಶದಲ್ಲಿ ಭಯದ ವಾತಾವರಣ ನಿರ್ಮಿಸಿರುವ ಆಡಳಿತ ಪಕ್ಷದಿಂದ ದೇಶದ ಜನತೆ ಬೇಸತ್ತಿದ್ದು, ಇಂತಹ ಜನ ವಿರೋಧಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದ್ದು, ಯುವಕರು ಕಾಂಗ್ರೆಸ್ ಸದಸ್ಯತ್ವವನ್ನು ಪಡೆಯುವ ಮೂಲಕ ದೇಶ ರಕ್ಷಿಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಕರೆ ನೀಡಿದರು.

ತಮ್ಮ ಜನಸಂಪರ್ಕ ಕಚೇರಿಯಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹರೀಶ್ ಬಸಾಪುರ ಅವರಿಗೆ 105 ರೂ. ನೀಡುವುದರ ಮೂಲಕ ಆಕ್ಟಿವ್ ಸದಸ್ಯತ್ವ ಪಡೆದು ನಂತರ ಅವರು ಮಾತನಾಡಿದರು.

ತುಂಬಾ ಸಂತೋಷ ಆಗುತ್ತಿದೆ. ಕಾಂಗ್ರೆಸ್ ಅಂತ ಹೇಳಿದರೆ ಹೋರಾಟ, ದೇಶಗಳಲ್ಲಿ ಕಾಂಗ್ರೆಸ್ ಹೋರಾಟಕ್ಕೆ ದೊಡ್ಡ ಇತಿಹಾಸವಿದೆ. ಸದಸ್ಯತ್ವ ನೋಂದಣಿ ಕಾರ್ಯಕ್ರಮ ಬಹಳ ಹಳೆಯದು ಎಂದು ಹೇಳಿದರು.

ಈಗಾಗಲೇ ದಾವಣಗೆರೆಯಲ್ಲಿ ನೋಂದಣಿ ಆರಂಭಗೊಂಡಿದ್ದು, ಸದಸ್ಯತ್ವ ಪಡೆಯಲು ಯುವಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದು ಪಕ್ಷದ ಸಂಘಟನೆಗೆ ಅನುಕೂಲ ಎಂದು ತಿಳಿಸಿದರು. 

ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ನೋಂದಣಿ ಕಾರ್ಯಕ್ರಮದ ಮೂಲಕ ಚಾಲನೆ ಕೊಡಲಾಗಿದ್ದು, ಬೂತ್ ಮಟ್ಟದಲ್ಲಿ ಸ್ಥಳೀಯ ಮುಖಂಡರು ಹೆಚ್ಚಿನ ಒತ್ತು ನೀಡಿ, ಪಕ್ಷದ ಸದಸ್ಯತ್ವ ನೀಡುವುದರ
ಜೊತೆಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ತಿಳಿಸಿಕೊಡಬೇಕು ಎಂದು ಅವರು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕೆ.ಶೆಟ್ಟಿ, ಎಸ್.ಮಲ್ಲಿಕಾರ್ಜುನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೆ.ಜಿ.ಶಿವಕುಮಾರ್, ಅಯೂಬ್ ಪೈಲ್ವಾನ್, ಮಾಗಾನಹಳ್ಳಿ ಪರಶುರಾಮ್,  ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಸದಸ್ಯ ಜಿ.ಎಸ್.ಮಂಜುನಾಥ್, ಬಸಾಪುರ ಕೊಟ್ರಯ್ಯ, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬೇತೂರು ಕರಿಬಸಪ್ಪ, ಬಾತಿ ಶಿವಕುಮಾರ್, ಸೈಯದ್ ಬಾಷಾ, ಸೈಯದ್ ಜಿಕ್ರಿಯಾ, ಸುಭಾನ್ ಸಾಬ್, ಶಿವಣ್ಣ, ಸಿದ್ದೇಶ್, ಯುವರಾಜ್ ಮತ್ತಿತರರಿದ್ದರು.

error: Content is protected !!