ಜಗಳೂರಿನಲ್ಲಿ ಮಕ್ಕಳ ಆರೋಗ್ಯ ವಿಚಾರಿಸಿದ ಡಿಸಿ-ಎಸ್ಪಿ

ಜಗಳೂರು, ಡಿ.20- ಇಲ್ಲಿನ ವಸತಿ ಶಾಲೆಯಲ್ಲಿ ಮಕ್ಕಳು ಕಲುಷಿತ ಆಹಾರ ಸೇವನೆ ಮಾಡಿ ಅಸ್ವಸ್ತಗೊಂಡ ಹಿನ್ನೆಲೆಯಲ್ಲಿ  ಇಂದು ವಸತಿ ಶಾಲೆಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮತ್ತು ಎಸ್.ಪಿ. ರಿಷ್ಯಂತ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ತಿಂಡಿ, ಊಟ ಸರಿಯಾಗಿ ನೀಡುವುದಿಲ್ಲ , ಸ್ನಾನಕ್ಕೆ ಬಿಸಿ ನೀರಿನ ವ್ಯವಸ್ಥೆ ಇಲ್ಲ  ಎಂದು  ಮಕ್ಕಳು  ತಮ್ಮ ಆಳಲನ್ನು  ಅಧಿಕಾರಿಗಳ ಮುಂದೆ ತೊಡಿಕೊಂಡರು. ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಮಕ್ಕಳಿಗೆ ಸಮರ್ಪಕವಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

error: Content is protected !!