ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಅಭಿಯಾನ ನಡೆಸಲು ಕರೆ

ಬಸವಾಪಟ್ಟಣ ಬ್ಲಾಕ್ ಮಟ್ಟದ ಸಭೆಯಲ್ಲಿ ಡಾ. ವೈ.ರಾಮಪ್ಪ  

ದಾವಣಗೆರೆ,ಜೂ.8- ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಬೂತ್ ಮಟ್ಟ ಮತ್ತು ಪಂಚಾಯ್ತಿ ವ್ಯಾಪ್ತಿಯಲ್ಲಿ ಅಭಿಯಾನ ನಡೆಸುವಂತೆ ಕಾಂಗ್ರೆಸ್ ಮುಖಂಡರೂ ಆದ ಜಿ.ಪಂ. ಮಾಜಿ ಅಧ್ಯಕ್ಷ ಡಾ. ವೈ. ರಾಮಪ್ಪ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಸವಾಪಟ್ಟಣದ ಹಾಲಸ್ವಾಮಿ ಗದ್ದುಗೆಯಲ್ಲಿ ಇಂದು ನಡೆದ ಕಾಂಗ್ರೆಸ್ ಪಕ್ಷದ ಬ್ಲಾಕ್‍  ಮಟ್ಟದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭವು ಇದೇ ದಿನಾಂಕ 14ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಹಾಗೂ ಕಾರ್ಯಕ್ರಮದ ಮಾಹಿತಿಯನ್ನು ಕೆಪಿಸಿಸಿಗೆ ನೀಡುವಂತೆ ಪಕ್ಷದ ಕಾರ್ಯಕರ್ತರು  ಹಾಗೂ ಮುಖಂಡರಿಗೆ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎಲ್ಲಾ ರಚನಾತ್ಮಕ ಕಾರ್ಯಕ್ರಮ ಗಳನ್ನು ಜನರಿಗೆ ಮುಟ್ಟಿಸುವುದರ ಮೂಲಕ ಪಕ್ಷದ ಬಲವ ರ್ಧನೆಗೆ ಪೂರಕವಾದಂತಹ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಜೊತೆಗೆ, ರೈತಾಪಿ ವರ್ಗ, ಕೃಷಿ, ಕಾರ್ಮಿಕ ವರ್ಗ, ವಿದ್ಯಾರ್ಥಿ ಯುವಜ ನತೆಯ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸುವಂತೆ ರಾಮಪ್ಪ ಅವರು ಕರೆ ನೀಡಿದರು.

ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಣಜಿ, ಆನಗೋಡು, ಮಾಯಕೊಂಡ, ಬಾಡ, ಲೋಕಿಕೆರೆ, ತ್ಯಾವಣಿಗಿ, ಬಸವಾಪಟ್ಟಣ, ನಲ್ಲೂರು ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ,  ಗ್ರಾಮ ಪಂಚಾಯ್ತಿಗಳ ಮಟ್ಟದಲ್ಲಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಪಕ್ಷದ ಮುಖಂಡರಿಗೆ ರಾಮಪ್ಪ ಕಿರಿಮಾತು ಹೇಳಿದರು. 

ಕಾಂಗ್ರೆಸ್ ಮುಖಂಡ ಅಲ್ಲಂ ಪಾಷಾ ಸಭೆಯ ಅಧ್ಯಕ್ಷತೆ  ವಹಿಸಿದ್ದರು.  ಕಾಂಗ್ರೆಸ್  ಮುಖಂಡರಾದ ಹೂವಿನಮಡು ಚನ್ನಬಸಪ್ಪ, ಕಂಚುಗಾರನಹಳ್ಳಿ ಪಾಲಾ ಕ್ಷಪ್ಪ, ಜೆಸ್ಸಿ ಪ್ರಭುದೇವ್, ಜಾಹೀರ್ ಪಟೇಲ್, ಓಂಕಾ ರನಾಯ್ಕ, ಚಿರಡೋಣಿ ಮಂಜುನಾಥ್, ಸೈಯದ್‍ ಹಿದಾಯತ್, ಆಸಿಫ್, ತಿಪ್ಪೇಸ್ವಾಮಿ, ಚಿರಡೋಣಿ ಹನುಮಂತಪ್ಪ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

error: Content is protected !!