ಅತ್ತಿಗೆರೆ ಕೃಷಿ ಸಹಕಾರ ಸಂಘದಿಂದ ಸ್ವ-ಸಹಾಯ ಸಂಘಗಳಿಗೆ ಸಾಲ

ದಾವಣಗೆರೆ,ಅ.1- ಕೊರೊನಾದಿಂದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ಅತ್ತಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್.ಸಿದ್ದೇಶ್ ಮತ್ತು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಕ್ಷೇತ್ರಾಧಿಕಾರಿ ಸಿ.ನಾಗರಾಜ್ ಅವರು 27 ಸ್ವಸಹಾಯ ಸಂಘಗಳಿಗೆ ಪ್ರತಿ ಸಂಘಕ್ಕೆ 1.10 ಲಕ್ಷ ರೂ.ಗಳಂತೆ ಒಟ್ಟು ಸಾಲದ ಮೊತ್ತ 29.70 ಲಕ್ಷ ರೂ.ಗಳನ್ನು ಸಾಲದ ರೂಪದಲ್ಲಿ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸಹಕಾರ ಸಂಘದ ಸಿಇಒ ದೇವರಾಜ್‌ ಮತ್ತು ಶ್ರೀಮತಿ ಆಶಾ ದೇವರಾಜ್ ಅವರನ್ನು ಸನ್ಮಾನಿಸಲಾಯಿತು.

ಕೊರೊನಾ ಸಂದರ್ಭಗಳಲ್ಲಿ ನೀಡಿರುವ ಈ ಹಣಕಾಸು ಸಾಲ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ದಾವ ಣಗೆರೆ ತಾಲ್ಲೂಕಿನ ಸಹಕಾರ ಅಭಿವೃದ್ಧಿ ಅಧಿಕಾರಿ ಜಿ.ಎಸ್.ಸುರೇಂದ್ರ  ಅವರು ಸ್ವಸಹಾಯ ಗುಂಪು ಮತ್ತು ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕರೆ ನೀಡಿದರು.

ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕ ಮಾವಿನಹಾಳಪ್ಪ, ವಿಶಾಲಾಕ್ಷಮ್ಮ, ಕತ್ತಲಗೆರೆ ಮಂಜುನಾಥ್, ಬಸವರಾಜ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!