ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳ ಗ್ರಾಮದ ಚಂದ್ರಶೇಖರ ಐರಣಿ (67) ಅವರು ದಿನಾಂಕ 04.10.2020ರ ಭಾನುವಾರ ಬೆಳಗಿನ ಜಾವ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 5.10.2020ರ ಸೋಮವಾರ ಮಧ್ಯಾಹ್ನ 2.30ಕ್ಕೆ ಕಕ್ಕರಗೊಳ್ಳ ಗ್ರಾಮದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಮೃತರು ಕನ್ನಡಪ್ರಭ ಜಿಲ್ಲಾ ವರದಿಗಾರರಾದ ನಾಗರಾಜ ಬಡದಾಳ್ ಅವರ ಮಾವ.
July 23, 2024