ವಿಚಾರಣಾಧೀನ ಖೈದಿ ಸಾವು

ದಾವಣಗೆರೆ, ಅ.12- ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಖೈದಿಯೋರ್ವ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿರುವ ಘಟನೆ ಇಂದು ನಡೆದಿದೆ.

ಚನ್ನಗಿರಿ ತಾಲ್ಲೂಕಿನ ಚಂದ್ರಪ್ಪ ಎಂಬಾತ ಮೃತನು. ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಈತನನ್ನು ವಿಚಾರಣೆಗಾಗಿ ನಗರದ ಉಪ ಕಾರಾಗೃಹದಲ್ಲಿ ಇರಿಸಲಾಗಿತ್ತು. ಪಾರ್ಶ್ವವಾಯುನಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಇದೇ ದಿನಾಂಕ 6ಕ್ಕೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

error: Content is protected !!