ಜಿಲ್ಲಾ ಕಸಾಪದಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ದಾವಣಗೆರೆ, ನ.1- ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 65ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ನಗರದ ಕುವೆಂಪು ಕನ್ನಡ ಭವನದಲ್ಲಿ ಸರಳವಾಗಿ ಇಂದು ಆಚರಿಸಲಾಯಿತು. ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಹೆಚ್.ಎಸ್.ಮಂಜುನಾಥ್‌ ಕುರ್ಕಿ ಅಧ್ಯಕ್ಷತೆ ವಹಿಸಿದ್ದರು. 

ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಎ.ಆರ್.ಉಜ್ಜನಪ್ಪ ಜಿಲ್ಲಾ ಕಸಾಪ ಗೌರವ ಬಿ.ದಿಳ್ಯಪ್ಪ, ಕಚೇರಿ ಕಾರ್ಯದರ್ಶಿ  ಜಿ.ಆರ್. ಷಣ್ಮುಖಪ್ಪ, ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ವಾಮದೇವಪ್ಪ, ಕಚೇರಿ ಕಾರ್ಯದರ್ಶಿ ಬಿ.ಎಂ.ಮುರಿಗಯ್ಯ ಕುರ್ಕಿ, ತಾಲ್ಲೂಕು ಕಸಾಪ ನಿರ್ದೇಶಕ ಬಿ.ಎಸ್.ಜಗದೀಶ್, ನಿರ್ದೇಶಕರಾದ ಶ್ರೀಮತಿ ರುದ್ರಾಕ್ಷಿ ಬಾಯಿ, ಸಿ.ಕೆ.ಪುಟ್ಟನಾಯಕ, ಹಿರಿಯ ಚಿತ್ರ ಕಲಾವಿದ ಎ.ಮಹಾಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

error: Content is protected !!