ಜಿಲ್ಲಾ ಪೊಲೀಸರಿಂದ ಏಕತಾ ನಡಿಗೆ

ದಾವಣಗೆರೆ, ಅ.31- ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ  ನಗರದಲ್ಲಿ ಇಂದು ಸಂಜೆ  ಏಕತಾ ನಡಿಗೆ ನಡೆಸಲಾಯಿತು.

ಈ ನಡಿಗೆಗೆ ಪೊಲೀಸ್ ಅಧೀಕ್ಷಕ ಹನುಮಂತರಾಯ ಚಾಲನೆ ನೀಡಿದರು. ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಿಂದ ಆರಂಭಗೊಂಡ ನಡಿಗೆಯು ಅಕ್ಕಮಹಾದೇವಿ ರಸ್ತೆ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ವೃತ್ತ ಮೂಲಕ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದವರೆಗೆ ಪೊಲೀಸ್ ಅಧಿಕಾರಿ ಗಳು ಮತ್ತು ಸಿಬ್ಬಂದಿಗಳು ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ಹೆಜ್ಜೆ ಹಾಕಿ ಸಾರ್ವಜನಿಕರ ಗಮನ ಸೆಳೆದು ಏಕತೆಯ ಸಂದೇಶ ಸಾರಿದರು.

ಈ ನಡಿಗೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ. ರಾಜೀವ್, ಡಿವೈಎಸ್ಪಿ ನಾಗೇಶ್ ಐತಾಳ್, ಪಿ.ಬಿ. ಪ್ರಕಾಶ್, ಪೊಲೀಸ್ ನಿರೀಕ್ಷಕ ಗುರುಬಸವರಾಜ, ಗಜೇಂದ್ರಪ್ಪ, ಕಿರಣ್ ಕುಮಾರ್, ಪಿಎಸ್ಐಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಮತ್ತು ಪೊಲೀಸ್ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.

error: Content is protected !!