ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ

ರಾಣೇಬೆನ್ನೂರು, ನ.3- ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೆರವಿನಿಂದ ಪ್ರಾರಂಭವಾಗಿರುವ ಅಮೃತ ಯೋಜನೆಯ ಕೆಲಸದ ಗುಣಮಟ್ಟದ ಬಗ್ಗೆ ಕಾಳಜಿ ವಹಿಸಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ ಹೇಳಿದರು. ಅವರು ಚುನಾವಣೆ ನಂತರ ತಮ್ಮ ಪಕ್ಷದ ಮುಖಂಡರ ಜೊತೆಗೂಡಿ ಪತ್ರಿಕಾಗೋಷ್ಠಿ ನಡೆಸಿದರು.

ಜನತೆಗೆ ಅವಶ್ಯವಿರುವ ಮೂಲಭೂತ  ಸೌಕರ್ಯಗಳನ್ನು ಒದಗಿಸಲು ಎಲ್ಲ ಸದಸ್ಯರ ಜೊತೆ ಚರ್ಚಿಸಿ, ಎಲ್ಲ ವಾರ್ಡ್‌ಗಳಲ್ಲೂ ಸಮನಾಗಿ ಕೆಲಸಗಳನ್ನು ತೆಗೆದುಕೊಳ್ಳುವುದಾಗಿ ಅಧ್ಯಕ್ಷರು ಹೇಳಿದರು. ನಗರ ಅಭಿವೃದ್ಧಿಗೆ ಸಂಸದರ ಸಹಾಯ, ಸಹಕಾರದೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳನ್ನು ತರುವುದಾಗಿ ಶಾಸಕ ಅರುಣಕುಮಾರ ಹೇಳಿದರು. ಸಂಸದ ಶಿವಕುಮಾರ ಉದಾಸಿ, ಶಾಸಕ ಅರುಣಕುಮಾರ, ವಿಧಾನ ಪರಿಷತ್ ಸದಸ್ಯ ಶಂಕರ್ ಹಾಗೂ ಬಿಜೆಪಿ ಸದಸ್ಯರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.

error: Content is protected !!