ಕಾಂಗ್ರೆಸ್ ಕಚೇರಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ದಾವಣಗೆರೆ, ಜು. 31- ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ನಂತರ ಮಾತನಾಡಿದ ದಿನೇಶ್ ಕೆ ಶೆಟ್ಟಿ ಪ್ರತಿಯೊಬ್ಬರೂ ಮನೆಗೊಂದರಂತೆ ಗಿಡ ಬೆಳೆಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ  ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಸದಸ್ಯರುಗಳಾದ  ದೇವರಮನೆ ಶಿವಕುಮಾರ್, ಕೆ. ಚಮನ್ ಸಾಬ್,  ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ.ಎಲ್.ಹರೀಶ್ ಬಸಾಪುರ, ರಾಘು ದೊಡ್ಡಮನಿ, ಮಾಜಿ ನಗರಸಭಾ ಸದಸ್ಯ ಎಸ್. ಮಲ್ಲಿಕಾರ್ಜುನ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶ್,  ಎನ್.ಎಸ್.ಯು. ಐ ನ ಮುಜಾಹಿದ್, ತಾಲೂಕು ಪಂಚಾಯತ್ ಸದಸ್ಯೆ ಆಶಾರಾಣಿ ಮುರಳಿ, ಮುಖಂಡರಾದ ದಾದಾಪೀರ್, ಸುಷ್ಮಾ ಪಾಟೀಲ್, ಮಂಜುಳಾ, ರಹಜಾನ್, ಯುವರಾಜ್, ಮೇಘರಾಜ್, ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!