ಕೋವಿಡ್ 19 ಜಾಗೃತಿ ಜಾಥಾಕ್ಕೆ ಮೇಯರ್ ಚಾಲನೆ

ದಾವಣಗೆರೆ. ನ.7- ಕೋವಿಡ್ 19 ಜಾಗೃತಿ ಜಾಥಾಕ್ಕೆ ಕ್ಕೆ ಮಹಾನಗರ ಪಾಲಿಕೆ ಆವರಣದಲ್ಲಿ ಮೇಯರ್ ಬಿ.ಜೆ. ಅಜಯ್ ಕುಮಾರ್ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು. ಕಡ್ಡಾಯವಾಗಿ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೊನಾ ತಡೆಯಲು ಸಾರ್ವಜನಿಕರು ಸಹಕರಿಸುವಂತೆ  ಮೇಯರ್ ಅಜಯ್ ಮನವಿ ಮಾಡಿದರು.  ಜಾಥಾವು ಎವಿಕೆ ಕಾಲೇಜು ರಸ್ತೆ, ಜಯದೇವ ವೃತ್ತದ ಮೂಲಕ ಸಾಗಿ ಮರಳಿ ಪಾಲಿಕೆ ಆವರಣಕ್ಕೆ ಬಂದು ತಲುಪಿತು. ಸ್ಥಾಯಿ ಸಮಿತಿ ಅಧ್ಯಕ್ಷರಾದ ಜಯಮ್ಮ ಗೋಪಿನಾಯ್ಕ, ಎಸ್.ಟಿ.ವೀರೇಶ್, ಸದಸ್ಯ ಎಲ್.ಡಿ.ಗೋಣೆಪ್ಪ, ಆಯುಕ್ತ ವಿಶ್ವನಾಥ್ ಮುದಜ್ಜಿ ಮತ್ತು ಪಾಲಿಕೆ ಅಧಿಕಾರಿಗಳು ಭಾಗವಹಿಸಿದ್ದರು.

error: Content is protected !!