ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತ

ಪ್ರಾಣಾಪಾಯದಿಂದ ಪಾರು

ದಾವಣಗೆರೆ, ನ.10- ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಮತ್ತು ಸೊಸೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ ವಾಗಿ ಅದೃಷ್ವವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿ ರುವ ಘಟನೆ ನಗರದ ಹಳೆ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಇಂದು   ಸಂಭವಿಸಿದೆ. ಲ್ಯಾಂಡ್ ರೋವರ್ ಕಾರಿನಲ್ಲಿ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್ ಮತ್ತು ಸೊಸೆ ಶ್ರೀಮತಿ ಅಂಚಲ್ ಅವರು ದಾವಣಗೆರೆಯಿಂದ ಹುಬ್ಬಳ್ಳಿಗೆ  ತೆರಳುತ್ತಿದ್ದಾಗ ಲಾರಿ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಪ್ರಶಾಂತ್ ಶೆಟ್ಟರ್, ಅಂಚಲ್ ಮತ್ತು ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿ ಇಲ್ಲಿನ ಹೈಟೆಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು. 

ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ಪಿಎಸ್‍ಐ ಕಿರಣ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

error: Content is protected !!