ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಹರಪನಹಳ್ಳಿಯಲ್ಲಿ ಸಂಭ್ರಮಾಚರಣೆ

ಹರಪನಹಳ್ಳಿ,ನ.11-  ರಾಜ್ಯದ ಶಿರಾ, ಆರ್.ಆರ್. ನಗರ ಸೇರಿದಂತೆ ದೇಶದ ವಿವಿಧೆಡೆ ನಡೆದ ಉಪ ಚುನಾವಣೆ ಹಾಗೂ ಮೊನ್ನೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಭಾರೀ ಜಯಭೇರಿ ಗಳಿಸಿದ್ದು, ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ತಾಲ್ಲೂಕು ಬಿಜೆಪಿ ಅಧ್ಯಕ್ಷ ಸತ್ತೂರು ಹಾಲೇಶ್, ಪುರಸಭೆ ಅಧ್ಯಕ್ಷ ಮಂಜುನಾಥ್ ಇಜಂತಕರ್ ಮಾತನಾಡಿದರು. ಈ ಸಂದರ್ಭದಲ್ಲಿ  ಜಿಲ್ಲಾ ಬಿಜೆಪಿ ಎಸ್.ಟಿ. ಘಟಕದ ಕಾರ್ಯದರ್ಶಿ ಆರ್. ಲೋಕೇಶ್, ತಾಲ್ಲೂಕು ಬಿಜೆಪಿ ಉಪಾಧ್ಯಕ್ಷ ನಿಟ್ಟೂರು ಸಣ್ಣ ಹಾಲಪ್ಪ, ತಾಲ್ಲೂಕು ಬಿಜೆಪಿ ಮಹಿಳಾ ಘಟಕಾಧ್ಯಕ್ಷೆ ಟಿ. ಪದ್ಮಾವತಿ, ಪುರಸಭೆ ಸದಸ್ಯ ಎಸ್.ಕಿರಣಕುಮಾರ್, ತಾಲ್ಲೂಕು ಬಿಜೆಪಿ ಎಸ್.ಸಿ. ಘಟಕದ ಉಪಾಧ್ಯಕ್ಷ ಭಂಗಿ ಚಂದ್ರಪ್ಪ, ಮುಖಂಡರಾದ ಎಂ.ಪಿ. ನಾಯ್ಕ, ಬಾಗಳಿ ಕೊಟ್ರೇಶಪ್ಪ, ರಾಘವೇಂದ್ರ ಶ್ರೇಷ್ಠಿ, ಸಂತೋಷ್, ಮಲ್ಲೇಶ್, ಲಿಂಬ್ಯಾನಾಯ್ಕ್, ಬಿ.ವೈ. ವೆಂಕಟೇಶ್, ನಿರಂಜನ, ಮಾಬೂಸಾಬ್, ಸತ್ಯನಾರಾಯಣ ಹಾಗು ಇನ್ನಿತರರು ಇದ್ದರು.

error: Content is protected !!