ವೀರೇಶ್ವರ ಪುಣ್ಯಾಶ್ರಮ ಶಿಲಾಮಂಟಪಕ್ಕೆ ಬಕ್ಕೇಶ್ವರ ದೇವಸ್ಥಾನ ಸಮಿತಿಯಿಂದ ದೇಣಿಗೆ

ದಾವಣಗೆರೆ, ನ.11- ನಗರಕ್ಕೆ ಸಮೀಪದ ಬಾಡಾ ಕ್ರಾಸ್ ಬಳಿಯ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಿಲಾಮಂಟಪಕ್ಕೆ ನಗರದ ಶ್ರೀ ಬಕ್ಕೇಶ್ವರ ದೇವಸ್ಥಾನ ಸಮಿತಿಯಿಂದ ದೇಣಿಗೆ ನೀಡಲಾಗಿದೆ.

ಶ್ರೀ ಬಕ್ಕೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಶಿವಾನಂದಪ್ಪ, ಕಾರ್ಯದರ್ಶಿ ಅಥಣಿ ವೀರಣ್ಣ ಅವರುಗಳು ಶ್ರೀ ವೀರೇಶ್ವರ ಪುಣ್ಯಾಶ್ರಮದ ಕಾರ್ಯದರ್ಶಿ ಶಿವಮೂರ್ತಿ ಸ್ವಾಮಿ ಅವರಿಗೆ ದೇಣಿಗೆಯ ಚೆಕ್ ನೀಡಿದರು.

ಸುಮಾರು ಮೂರೂವರೆ ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಿಲಾಮಂಟಪಕ್ಕೆ ದಾನಿಗಳು ಉದಾರವಾಗಿ ದಾನ ನೀಡುತ್ತಿದ್ದಾರೆ ಎಂದು ಶಿವಮೂರ್ತಿ ಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದರು.

error: Content is protected !!