ಕೊಂಡಜ್ಜಿಯಲ್ಲಿ ಸ್ಕೌಟ್ಸ್ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ದಾವಣಗೆರೆ, ನ.14- 38ನೇ ಕೊಂಡಜ್ಜಿ ಬಸಪ್ಪನವರ ಪುಣ್ಯಸ್ಮರಣೆ ಮತ್ತು ಮಕ್ಕಳ ದಿನಾಚರಣೆ ಹಾಗೂ ಸರ್ವಧರ್ಮ ಪ್ರಾರ್ಥನೆಯನ್ನು ಕೊಂಡಜ್ಜಿಯಲ್ಲಿರುವ ಕೊಂಡಜ್ಜಿ ಬಸಪ್ಪ ರಾಜ್ಯ ಸ್ಕೌಟ್ಸ್-ಗೈಡ್ಸ್ ತರಬೇತಿ ಕೇಂದ್ರದಲ್ಲಿ ಇಂದು ನಡೆಯಿತು.

ಅಧ್ಯಕ್ಷತೆಯನ್ನು ಮಾಜಿ ಸಚಿವ ಪಿ.ಜಿ.ಆರ್ ಸಿಂಧ್ಯಾ, ಅತಿಥಿಗಳಾಗಿ ಬಿಬಿಎಂಪಿ ಸಂಯೋಜಕ ಎಂ.ಚೆಲ್ಲಯ್ಯ, ಆಜೀವ ಸದಸ್ಯರಾದ ಡಾ.ಗುರುಮೂರ್ತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಉಪಾಧ್ಯಕ್ಷ ಕೊಂಡಜ್ಜಿ ಬಿ.ಷಣ್ಮುಖಪ್ಪ, ಹರಿಹರ ತಹಶೀಲ್ದಾರ್ ರಾಮಚಂದ್ರಪ್ಪ ಮತ್ತು ವಿಧಾನ ಪರಿಷತ್ ಸದಸ್ಯರಾದ ಮೋಹನ್ ಕುಮಾರ್ ಕೊಂಡಜ್ಜಿ ಮತ್ತು ಅಂತರರಾಷ್ಟ್ರೀಯ ಉಪ ಮುಖ್ಯ
ಆಯುಕ್ತ ಮಧುಸೂದನ್, ಜಿಲ್ಲಾ ಸ್ಕೌಟ್ ಆಯುಕ್ತ ಎ.ಪಿ ಷಡಕ್ಷರಪ್ಪ ಮತ್ತಿತರರು ಉಪಸ್ಥಿತರಿದ್ದರು.

error: Content is protected !!