ಮಲೇಬೆನ್ನೂರು, ನ.22- ಕಡರನಾಯಕನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಗುಂಡೇರಿ ಹನುಮಂತಪ್ಪ, ಉಪಾಧ್ಯಕ್ಷರಾಗಿ ಶ್ರೀಮತಿ ಕೊಕ್ಕನೂರು ಗೌರಮ್ಮ ಅವರು ನಿನ್ನೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಅಭಿವೃದ್ಧಿ ಅಧಿಕಾರಿ ಎನ್.ಜಿ.ರುದ್ರಪ್ಪ ಚುನಾವಣಾಧಿಕಾರಿಯಾಗಿದ್ದರು. ಸಂಘದ ಸಿಇಓ ಎನ್. ತಿಪ್ಪೇಶ್ ಸ್ವಾಗತಿಸಿದರು.
July 24, 2024