ಲೇಡಿಸ್‌ ಕ್ಲಬ್‌ನಿಂದ ಕನ್ನಡ ರಾಜ್ಯೋತ್ಸವ

ದಾವಣಗೆರೆ, ನ.21- ನಗರದ ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್‌ನಲ್ಲಿರುವ ಡಾ. ಶಾಮನೂರು ಶಿವಶಂಕರಪ್ಪ ಉದ್ಯಾನವನದಲ್ಲಿ ಲೇಡಿಸ್‌ ಕ್ಲಬ್‌ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. 15ನೇ ವಾರ್ಡ್‌ನ ಪಾಲಿಕೆ ಸದಸ್ಯರಾದ ಶ್ರೀಮತಿ ಆಶಾ ಉಮೇಶ್‌, ಲೇಡಿಸ್‌ ಕ್ಲಬ್‌ನ ಸಂಸ್ಥಾಪಕರಾದ ಅಮೀರಬಾನು ಮಾತನಾಡಿದರು. ಅಧ್ಯಕ್ಷರಾದ ದ್ರಾಕ್ಷಾಯಣಿ ಅಂದಾನಪ್ಪ, ಪ್ರಧಾನ ಕಾರ್ಯದರ್ಶಿ ಚೇತನ ಶಿವಕುಮಾರ್‌, ಕಾರ್ಯದರ್ಶಿ ಭಾಗ್ಯ ಮತ್ತಿತರರು ಭಾಗವಹಿಸಿದ್ದರು.

error: Content is protected !!