ದಾವಣಗೆರೆ, ಡಿ.17- ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ದಾವಣಗೆರೆ ಇವರು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿಯಲ್ಲಿ ತೊಗರಿ ಬೆಳೆಯ ಗುಚ್ಚ ಮುಂಚೂಣಿ ಪ್ರಾತ್ಯಕ್ಷಿಕೆಯ ಅಡಿಯಲ್ಲಿ ಕ್ಷೇತ್ರೋತ್ಸವವನ್ನು ರಾಮೇಶ್ವರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞ ಮಲ್ಲಿಕಾರ್ಜುನ್ ಮಾತನಾಡಿ, ಅಧಿಕ ಇಳುವರಿ ಕೊಡುವ ತಳಿಯಾದ ಬಿಆರ್ಜಿ 5, ಇದರ ಜೊತೆಗೆ ಸರಿಯಾದ ಸಮಯಕ್ಕೆ ಕೀಟ ಮತ್ತು ರೋಗ ನಿರ್ವಹಣೆ ಹಾಗೂ ಪಲ್ಸ್ ಮ್ಯಾಜಿಕ್ ಬಳಕೆ ಮಾಡಿದ್ದರಿಂದ ಉತ್ತಮವಾದ ಇಳುವರಿಯ ನಿರೀಕ್ಷೆಯಲ್ಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ರಾಕೇಶ್, ರವಿಕುಮಾರ್, ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.