ಹಾನಿಗೊಳಗಾದ ಮನೆಗೆ ಕಾಂಗ್ರೆಸ್ ನಿಯೋಗ ಭೇಟಿ

ದಾವಣಗೆರೆ, ಆ. 18 –  ನಗರದ ದುರ್ಗಾಂಬಿಕಾ ದೇವಸ್ಥಾನದ ಬಳಿಯ ದೇವಾಂಗ ಪೇಟೆಯಲ್ಲಿ ಮಳೆಯಿಂದಾಗಿ ಸೌಭಾಗ್ಯ ಎಂಬುವವರಿಗೆ ಸೇರಿದ ಮನೆ ಭಾಗಶಃ ಹಾನಿಗೊಳಗಾದ ಹಿನ್ನೆಲೆಯಲ್ಲಿ ಶಾಸಕ ಡಾ|| ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಸೂಚನೆ ಮೇರೆಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ,  ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಇಂದು ಭೇಟಿ ನೀಡಿ, ಪರಿಹಾರವನ್ನು ಶೀಘ್ರ ವಿತರಿಸುವಂತೆ ತಾಲ್ಲೂಕು ಕಚೇರಿ ಅಧಿಕಾರಿಗಳಿಗೆ ತಿಳಿಸಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ದೇವರಮನಿ ಶಿವಕುಮಾರ್, ವಿನಾಯಕ, ಜಿ.ಡಿ.ಪ್ರಕಾಶ್, ಮಾಜಿ ಮಹಾಪೌರರಾದ ಶ್ರೀಮತಿ ಅನಿತಾಬಾಯಿ ಮಾಲತೇಶ್, ತಾಲ್ಲೂಕು ಕಚೇರಿಯ ಆರ್.ಐ.ಕೇಶವಮೂರ್ತಿ ಮತ್ತಿತರರು  ಉಪಸ್ಥಿತರಿದ್ದರು.

error: Content is protected !!