ಹರಿಹರ ಆರೋಗ್ಯ ಮಾತೆ ಚರ್ಚ್‍ನಲ್ಲಿ ಮೇರಿ ಮಾತೆ ಜಾತ್ರೆಗೆ ಚಾಲನೆ

ಹರಿಹರ, ಆ.30- ಪಟ್ಟಣದ ಆರೋಗ್ಯ ಮಾತೆ ಚರ್ಚ್‍ನಲ್ಲಿ ಮೇರಿ ಮಾತೆ ಜಾತ್ರಾ ಕಾರ್ಯಕ್ರಮವನ್ನು ಧ್ವಜಾರೋಹಣ ಮಾಡುವ ಮೂಲಕ ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟಿಸಿದರು. ಕಳೆದ ವರ್ಷ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜಾತ್ರೆಯನ್ನು ಆಚರಿಸಲಾಗಿತ್ತು. ಈ ವರ್ಷ ದೇಶದಲ್ಲಿ ಮಹಾಮಾರಿ ಕೊರೊನಾ ಇರುವುದರಿಂದ ನಾವೆಲ್ಲರೂ ಸರಳವಾಗಿ ಮನೆಯಲ್ಲೇ ಆಚರಿಸೋಣ ಎಂದರು.

ಈ ಸಂದರ್ಭದಲ್ಲಿ ಬೆಸಿಲಿಕಾ ಚರ್ಚ್ ಮುಖ್ಯಸ್ಥರು, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಮಾಜಿ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ಹಾಗೂ ಇತರರು ಉಪಸ್ಥಿತರಿದ್ದರು.

error: Content is protected !!