ಜಿಲ್ಲೆಯಲ್ಲಿ ಬೂತ್‍ ಮಟ್ಟದಿಂದ ಪಕ್ಷ ಸಂಘಟಿಸಬೇಕು

ಜಿಲ್ಲೆಯಲ್ಲಿ ಬೂತ್‍ ಮಟ್ಟದಿಂದ ಪಕ್ಷ ಸಂಘಟಿಸಬೇಕು - Janathavaniದಾವಣಗೆರೆ, ಸೆ.3- ಜಿಲ್ಲೆಯಲ್ಲಿ ಬೂತ್‍ ಮಟ್ಟದಿಂದ ಪಕ್ಷವನ್ನು ಸಂಘಟಿಸುವ ಕೆಲಸ ಮಾಡಬೇಕಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ ಗೀತಾ ವಿವೇಕಾನಂದ ಪಕ್ಷದ ಮಹಿಳಾ ಕಾರ್ಯಕರ್ತೆಯರಿಗೆ ಕರೆ ನೀಡಿದರು.

ಅವರು, ಇಂದು ನಗರದ ಪಕ್ಷದ ಕಾರ್ಯಾಲಯದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಸಮಿತಿ ಸಭೆಯಲ್ಲಿ  ಪಾಲ್ಗೊಂಡು ಮಾತನಾಡಿದರು. ನಮ್ಮದೇ ಸರ್ಕಾರಗಳು ರಾಜ್ಯ, ಕೇಂದ್ರದಲ್ಲಿ ಆಡಳಿತದಲ್ಲಿದ್ದು, ಅವುಗಳ ಯೋಜನೆಗಳನ್ನು ಜನರಿಗೆ ಅದರಲ್ಲೂ ಮಹಿಳೆಯರಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಇದರಿಂದ ಪಕ್ಷ ಮತ್ತಷ್ಟು ಪ್ರಬಲವಾಗಲು ಸಾಧ್ಯ ಎಂದು ಸಲಹೆ ನೀಡಿದರು.

ಜಿಲ್ಲಾಧ್ಯಕ್ಷರಾದ ಮಂಜುಳಾ ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಮಾತನಾಡಿದರು.

ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಸುನೀತ ಜಗದೀಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದೀಪ ಜಗದೀಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಮಮತಾ ಮಲ್ಲೇಶ್ ಸೇರಿದಂತೆ ಇತರರು ಇದ್ದರು.

ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸವಿತಾ ರವಿಕುಮಾರ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುಷ್ಪಾ ವಾಲಿ ನಿರೂಪಿಸಿದರು. ದಾವಣಗೆರೆ ಉತ್ತರ ಮಂಡಲದ ಅಧ್ಯಕ್ಷರಾದ ಸರ್ವಮಂಗಳ ವಂದಿಸಿದರು.

error: Content is protected !!