ಮಲ್ಲನಾಯ್ಕನಹಳ್ಳಿ : ದೇವಸ್ಥಾನಕ್ಕೆ ಧರ್ಮಸ್ಥಳದ ನೆರವು

ಮಲ್ಲನಾಯ್ಕನಹಳ್ಳಿ : ದೇವಸ್ಥಾನಕ್ಕೆ ಧರ್ಮಸ್ಥಳದ ನೆರವು

ಮಲೇಬೆನ್ನೂರು, ಜ. 23- ಮಲ್ಲನಾಯ್ಕನಹಳ್ಳಿ ಗ್ರಾಮದ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಶ್ರೀ ಗಂಗಾ ಪರಮೇಶ್ವರಿ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ. ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿದ 1.50 ಲಕ್ಷ ರೂ.ಗಳ ಡಿಡಿಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಜಯಕುಮಾರ್ ನಾಗನಾಳ್ ಅವರು ದೇವಸ್ಥಾನ ಸಮಿತಿಯವರಿಗೆ ನೀಡಿದರು.

ಮಲೇಬೆನ್ನೂರು ಯೋಜನಾಧಿಕಾರಿ ವಸಂತ್ ದೇವಾಡಿಗ, ದೇವಸ್ಥಾನದ ಸಮಿತಿ ಅಧ್ಯಕ್ಷ ಯವರಾಜ್, ಉಪಾಧ್ಯಕ್ಷ ರಾಜಪ್ಪ, ಕಾರ್ಯದರ್ಶಿ ಹನುಮಂತ, ಗ್ರಾಮದ ಮುಖಂಡರಾದ ಬಿ.ಎಂ. ಶೇಖರಪ್ಪ, ಚೌಡಪ್ಪ, ಒಕ್ಕೂಟದ ಅಧ್ಯಕ್ಷೆ ಮಾಯಮ್ಮ, ಪೂಜಾ, ವಲಯ ಮೇಲ್ವಚಾರಕಿ ಸವಿತಾ, ಸೇವಾ ಪ್ರತಿನಿಧಿಗಳಾದ ನಾಗಮ್ಮ, ಉಷಾ ಮತ್ತು ಗ್ರಾಮಸ್ಥರು ಈ ವೇಳೆ ಹಾಜರಿದ್ದರು.

error: Content is protected !!