ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಜಗಳೂರಲ್ಲಿ ಬಿಜೆಪಿ ಸಂಭ್ರಮಾಚರಣೆ

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಜಗಳೂರಲ್ಲಿ ಬಿಜೆಪಿ ಸಂಭ್ರಮಾಚರಣೆ

ಜಗಳೂರು, ಫೆ. 2- ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ 5,300 ಕೋಟಿ ರೂ.ಅನುದಾನ ನೀಡಿದ್ದಕ್ಕಾಗಿ ಬಿಜೆಪಿ ಕಾರ್ಯಕರ್ತರು ಇಂದು ಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಿಸಿದರು.

ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆಯ ಯೋಜನೆಗೆ 5,300 ಕೋಟಿ ರೂ. ಅನುದಾನವನ್ನು ನಿಗದಿಗೊಳಿಸಿರುವುದು ಬರಪೀಡಿತ ಕ್ಷೇತ್ರದ ಜನರಿಗೆ ಸಂತಸ ಉಂಟು ಮಾಡಿದೆ ಎಂದು  ತಾಲ್ಲೂಕಿನ ಬಿಜೆಪಿಯ ವಿವಿಧ ಮುಖಂಡರುಗಳು, ಬಿಜೆಪಿ ಕಾರ್ಯಕರ್ತರು ಸೇರಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಿ.ವಿ. ನಾಗಪ್ಪ,  ಮಾಜಿ ಪ್ರಧಾನ ಕಾರ್ಯ ದರ್ಶಿ ಜೆ.ವಿ.ನಾಗರಾಜ್,  ಆರ್.ತಿಪ್ಪೇ ಸ್ವಾಮಿ, ಕೇಂದ್ರ ಸರ್ಕಾರ ನೀರಾ ವರಿ ಯೋಜನೆಗೆ ಹೆಚ್ಚಿನ ಅನುದಾನ ನೀಡಿರುವುಕ್ಕೆ ಪ್ರಧಾನ ಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದರು. 

ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ವಿಶಾಲಾಕ್ಷಿ ಓಬಳೇಶ್, ಸದಸ್ಯರಾದ ಪಾಪಲಿಂಗಪ್ಪ, ಕಾಯಿ ರೇವಣ್ಣ, ನವೀನ್ ಕುಮಾರ್, ಬಿ.ಪಿ. ಸುಭಾನ್, ರುದ್ರಮುನಿ, ಪಕ್ಷದ ಮುಖಂಡರಾದ ಲಲಿತಮ್ಮ ಶಿವಣ್ಣ, ಕೆ.ಟಿ. ಬಡಯ್ಯ,  ರಾಜೇಶ್, ಕಿರಣ್, ಮಹೇಶ್,  ರಮೇಶ್, ಓಬಣ್ಣ, ನಾಗರಾಜ್  ಮುಂತಾದವರು ಭಾಗವಹಿಸಿದ್ದರು.

error: Content is protected !!