ಹರಿಹರ, ಫೆ. 22- ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯಲ್ಲಿ ಶಾಸಕ ಎಸ್. ರಾಮಪ್ಪ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ವೇಳೆ ಮಾತನಾಡಿದ ಶಾಸಕರು, ನಾಡಿನ ಜನರ ಒಳಿತಿಗಾಗಿ ತಮ್ಮದೇ ಆದ ಕೊಡುಗೆಯನ್ನು ನೀಡಿರುವ ಛತ್ರಪತಿ ಶಿವಾಜಿ ಯವರ ಆದರ್ಶಗಳನ್ನು ಇಂದಿನ ಯುವಕರು ಮೈಗೂಡಿಸಿಕೊಂಡು ಹೋಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರೇಡ್2 ತಹಶೀಲ್ದಾರ್ ಶಶಿಧರಯ್ಯ, ಮರಾಠ ಸಮಾಜದ ಅಧ್ಯಕ್ಷ ಮರಿಯೋಜಿರಾವ್, ಅಜಿತ್ ಸಾವಂತ್, ಡಾ. ಶಂಕರ್, ಆರ್.ಐ. ಮಂಜುನಾಥ್, ವಿ.ಎ ಹೇಮಂತ್ ಕುಮಾರ್, ಮಂಜುನಾಥ್, ಬಸವರಾಜಯ್ಯ ಮತ್ತಿತರರು ಉಪಸ್ಥಿತರಿದ್ದರು.