ಮಕ್ಕಳ ಬೆಳವಣಿಗೆಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆ ಮುಖ್ಯ

ಮಕ್ಕಳ ಬೆಳವಣಿಗೆಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆ ಮುಖ್ಯ

ಶೀಘ್ರವೇ ಬಾಲ ಭವನದ ಟ್ರಾಯ್ ಟ್ರೈನ್ ಚಾಲನೆ ಕ್ರಮಕೈಗೊಳ್ಳಲು ಸೂಚನೆ : ಸಿಇಒ ಡಾ.ಎ.ಚೆನ್ನಪ್ಪ

ದಾವಣಗೆರೆ, ಫೆ.23- ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಪಠ್ಯೇತರ ಚಟುವಟಿಕೆಗಳ ಅವಶ್ಯಕ ವಾಗಿದ್ದು, ಅಂತಹ ಚಟುವಟಿಕೆಗಳಿಗೆ ಬಾಲಭವನವು ಉತ್ತಮ ವೇದಿಕೆ ಬಾಲಭವನದ ಆವರಣದಲ್ಲಿ ವಾರಾಂತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಬಾಲಭವನ ಸೊಸೈಟಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚೆನ್ನಪ್ಪ ತಿಳಿಸಿದರು. 

ನಗರದ ಜೆ.ಹೆಚ್ ಪಾಟೀಲ್ ಬಡಾವಣೆಯ ಬಾಲಭವನದಲ್ಲಿ ನಿನ್ನೆ ಏರ್ಪಡಿಸಿದ್ದ, ಶ್ರೀಮತಿ ಪೂರ್ಣಿಮಾ ಪ್ರಕಾಶ್ ರಾಜ್ಯ ಬಾಲಭವನ ಸೊಸೈಟಿ, ಬೆಂಗಳೂರು ಇವರು ಜಿಲ್ಲಾ ಬಾಲಭವನ ಹಾಗೂ ತಾಲ್ಲೂಕು ಬಾಲಭವನ ಸೊಸೈಟಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತಾನಾಡಿದರು.

ಜಿಲ್ಲಾ ಬಾಲಭವನದ ಆವರಣದಲ್ಲಿ 2019ರಲ್ಲಿ ಉದ್ಘಾಟನೆಯಾದ `ಟಾಯ್‍ಟ್ರೈನ್’ ಈವರೆಗೆ ಕಾರ್ಯಾರಂಭ ಮಾಡದಿರುವ ಬಗ್ಗೆ ಪರಿಶೀಲಿಸುತ್ತಾ ಟ್ರೈನ್‌ ಇಂಜಿನ್ ರಿಪೇರಿ ಹಾಗೂ ರೈಲು ಹಳಿಗಳ ರಿಪೇರಿಗಾಗಿ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಬರೆದಿರುವ ಪತ್ರಗಳನ್ನು ಅನುಸರಣೆ ಮಾಡಿ ಕೂಡಲೇ ರೈಲು ಹಾಗೂ ರೈಲು ಹಳಿಗಳನ್ನು ದುರಸ್ಥಿ ಪಡಿಸಿಕೊಂಡು ಪುನರಾರಂಭ ಮಾಡಲು ಉಪನಿರ್ದೇಶಕರಿಗೆ ತಿಳಿಸಿದರು.

 ಜಿಲ್ಲಾ ಬಾಲಭವನವು ನಗರ ಪ್ರದೇಶದಿಂದ ಹೊರವಲಯದಲ್ಲಿರುವ ಕಾರಣ ಅಲ್ಲಿಗೆ ಮಕ್ಕಳು ಬರಬೇಕೆಂದರೆ ಬಾಲಭವನವನ್ನು ಅತ್ಯಂತ ಅಕರ್ಷಣೀಯವಾಗಿ ಅಭಿವೃದ್ಧಿ ಪಡಿಸುವುದು ಅವಶ್ಯಕವಾಗಿರುತ್ತದೆ. ಅದಕ್ಕಾಗಿ ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಬಾಲಭವನ ಆವರಣವನ್ನು ಅಭಿವೃದ್ಧಿ ಪಡಿಸಲು ತಮ್ಮ ತಮ್ಮ ಇಲಾಖೆಗಳಿಂದ ಯೋಜನೆಗಳನ್ನು ಹಾಕಿಕೊಂಡು ಕಾರ್ಯರೂಪಕ್ಕೆ ತರಬೇಕೆಂದು ಕೋರಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಇವರ ಸಹಯೋಗದಲ್ಲಿ ಈಗಾಗಲೇ ಕ್ರಿಯಾಯೋಜನೆ ಸಿದ್ಧಪಡಿಸಿ ಕಾರ್ಯ ಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸುತ್ತಾ ಈ ಕಾರ್ಯಕ್ರಮಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅರ್ಥಪೂರ್ಣ ವಾಗಿ ಮಾಡಲು ಕ್ರಿಯಾ ಯೋಜನೆ ಪರಿಷ್ಕರಿಸಲಾಗುವುದೆಂದು ತಿಳಿಸಿದರು. 

ವಾರಾಂತ್ಯ ಕಾರ್ಯಕ್ರಮದಲ್ಲಿ ಚಿತ್ರಕಲೆ, ಕ್ರಾಫ್ಟ್, ಮುಖವಾಡ ತಯಾರಿಕೆ, ಕ್ಲೇ ಮಾಡಲಿಂಗ್, ಗ್ರೀಟಿಂಗ್‌ ಕಾರ್ಡ್ ತಯಾರಿಕೆ ಹಾಗೂ ಗ್ರಾಮೀಣ ಕ್ರೀಡೆಗಳು ಮುಂತಾದ ಹಲವಾರು ಚಟುವಟಿಕೆಗಳನ್ನು ಮಕ್ಕಳಿಗಾಗಿ ಆಯೋಜಿಸಿ ಕಾರ್ಯಗತಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಪೂರ್ಣಿಮ ಪ್ರಕಾಶ್ ಮಾತನಾಡಿ, ಜಿಲ್ಲಾ ಬಾಲಭವನದಂತೆ ಪ್ರತಿ ತಾಲ್ಲೂಕಿ ನಲ್ಲಿಯೂ ತಾಲ್ಲೂಕು ಬಾಲಭವನದ ಕಟ್ಟಡಗಳ ನಿರ್ಮಾಣಕ್ಕಾಗಿ ನಿವೇಶನಗಳನ್ನು ಪಡೆದು ಕಟ್ಟಡ ನಿರ್ಮಾಣಕ್ಕಾಗಿ ಪ್ರಸ್ತಾವನೆಯನ್ನು ಸಲ್ಲಿಸಲು ತಿಳಿಸಿದರು. 

ಸಭೆಯಲ್ಲಿ ಉಪವಿಭಾಗ ಅಧಿಕಾರಿ ದುರ್ಗಾಶ್ರೀ, ಹೊನ್ನಾಳಿ ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ಮಹಾನಗರಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ವಾಸಂತಿ ಉಪ್ಪಾರ್ ಹಾಗೂ ಇತರರು ಹಾಜರಿದ್ದರು.

error: Content is protected !!