ಮಾತು ಸಾಧನೆಯಾಗಬಾರದು, ಸಾಧನೆ ಮಾತಾಗಬೇಕು

ಮಾತು ಸಾಧನೆಯಾಗಬಾರದು, ಸಾಧನೆ ಮಾತಾಗಬೇಕು - Janathavaniನ್ಯಾಮತಿ, ಫೆ. 23- ಮಾತು ಸಾಧನೆ ಯಾಗ ಬಾರದು, ಸಾಧನೆ ಮಾತಾಗಬೇಕು. ಈ ನಿಟ್ಟಿನಲ್ಲಿ ನಾನು ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನಲ್ಲಿ ಕೆಲಸ ಮಾಡುತ್ತಿದ್ದು, ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗಳನ್ನು ಅಭಿವೃದ್ಧಿ ಮಾಡಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

ತಾಲ್ಲೂಕಿನ ಯರಗನಾಳ್ ಗ್ರಾಮದಲ್ಲಿ 1.30 ಕೋಟಿ ರೂಪಾಯಿ ವೆಚ್ಚದಲ್ಲಿ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳು ನನ್ನ ಜನ್ಮಭೂಮಿ, ನನ್ನ ಕರ್ಮಭೂಮಿಗಳ ಅವುಗಳ ಸರ್ವತೋ ಮುಖ ಅಭಿವೃದ್ಧಿ ಮಾಡುವುದು ನನ್ನ ಕರ್ತವ್ಯವಾಗಿದೆ. ಅವಳಿ ತಾಲ್ಲೂಕಿನ ಪ್ರತಿಯೊಂದು ಹಳ್ಳಿಗಳನ್ನು ಅಭಿವೃದ್ಧಿ ಮಾಡಿದ್ದು, ಸಂಪೂರ್ಣ ಧೂಳು ಮುಕ್ತ ಗ್ರಾಮಗಳನ್ನಾಗಿ ಮಾಡಿದ್ದೇನೆಂದ ಶಾಸಕರು, ಅವಳಿ ತಾಲೂಕುಗಳನ್ನು ರಾಜ್ಯದಲ್ಲೇ ಮಾದರಿ ತಾಲೂಕು ಮಾಡುತ್ತೇನೆಂದರು.

ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷರಾದ ಕುಬೇರಪ್ಪ, ಉಪಾಧ್ಯಕ್ಷರಾದ ಸವಿತಾ, ಸದಸ್ಯರಾದ ಶೇಖರಪ್ಪ ಮುಖಂಡರಾದ ರುದ್ರಗೌಡ್ರು, ಶಾಂತವೀರಪ್ಪ, ಸುರೇಶಪ್ಪ, ರುದ್ರೇಶಪ್ಪ, ಗದ್ದಿಗೆಪ್ಪ, ಟಿ. ಗಂಗಪ್ಪ, ಜಗದೀಶಪ್ಪ, ಜಯಪ್ಪ, ನಾಗರಾಜ್ ಸೇರಿದಂತೆ ಮತ್ತಿತರರಿದ್ದರು.

error: Content is protected !!