ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ನೂತನ ದೇವಸ್ಥಾನ ಉದ್ಘಾಟನೆ, ಕಳಸಾರೋಹಣ ಮತ್ತು ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಶ್ರೀ ಗಂಗಾಪರಮೇಶ್ವರಿ ದೇವಿ ನೂತನ ದೇವಸ್ಥಾನ ಉದ್ಘಾಟನೆ, ಕಳಸಾರೋಹಣ ಮತ್ತು ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಅಂಗವಾಗಿ ಇಂದು ಪ್ರಾತಃಕಾಲ ಕಳಸಾರೋಹಣ ನಡೆಯುವುದು. ಬೆಳಿಗ್ಗೆ 9 ಗಂಟೆಗೆ ವೇದಿಕೆ ಕಾರ್ಯಕ್ರಮದಲ್ಲಿ ಕದಳಿ ವೇದಿಕೆ, ದಾವಣಗೆರೆ ಇವರಿಂದ ವಚನಗಾಯನ ನಡೆಯುವುದು.
ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಬನವಾಸಿ ನಾಗೇಶ್ ಭಟ್ ಅವರ ಪೌರೋಹಿತ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 11 ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ನರಸೀಪುರದ ಅಂಬಿಗರ ಚೌಡಯ್ಯನವರ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮೀಜಿ, ಹಿರಿಯೂರಿನ ಕೋಡಿಹಳ್ಳಿ ಮಠದ ಶ್ರೀ ಷಡಾಕ್ಷರಿಮುನಿ ದೇಶಿಕೇಂದ್ರ ಮಹಾಸ್ವಾಮೀಜಿ ವಹಿಸುವರು.
ವಿಶೇಷ ಆಹ್ವಾನಿತರಾಗಿ ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟಿಸುವರು. ಗೌಡ್ರ ಸಂಗಪ್ಪ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ಶಾಮನೂರು ಶಿವಶಂಕರಪ್ಪ, ಎಸ್. ರಾಮಪ್ಪ, ಎಸ್.ಎ. ರವೀಂದ್ರನಾಥ್, ಮೋಹನ್ಕುಮಾರ್ ಕೊಂಡಜ್ಜಿ, ಹೆಚ್.ಎಸ್. ಶಿವಶಂಕರ್, ಬಿ.ಪಿ. ಹರೀಶ್, ಹನಗವಾಡಿ ವೀರೇಶ್, ಕೆ.ಬಿ. ಷಣ್ಮುಖಪ್ಪ, ಎನ್. ಶಿವಕುಮಾರ್ ಕೊಂಡಜ್ಜಿ ಆಗಮಿಸುವರು.