ದೂಡಾದ ವಿವಿಧ ಕಾಮಗಾರಿಗಳಿಗೆ ಸಂಸದ, ಶಾಸಕರಿಂದ ಚಾಲನೆ

ದೂಡಾದ ವಿವಿಧ ಕಾಮಗಾರಿಗಳಿಗೆ ಸಂಸದ, ಶಾಸಕರಿಂದ ಚಾಲನೆ

ದಾವಣಗೆರೆ, ಮಾ.7- ದಾವಣಗೆರೆ – ಹರಿಹರ ನಗರಾಭಿವೃದ್ಧಿಕಾರದ ವತಿಯಿಂದ ಜೆ.ಹೆಚ್.ಪಟೇಲ್ ಬಡಾವಣೆ `ಎ’ ಬ್ಲಾಕ್ ಮತ್ತು ದುರ್ಗಾಂಬಿಕಾ ಬಡಾವಣೆಯಲ್ಲಿ ಕೈಗೊಳ್ಳಲುದ್ದೇಶಿಸಿರುವ ವಿವಿಧ ಕಾಮಗಾರಿಗಳಿಗೆ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತು ಹಿರಿಯ ಶಾಸಕ ಎಸ್.ಎ.ರವೀಂದ್ರನಾಥ್ ಅವರುಗಳು ಇಂದು ಚಾಲನೆ ನೀಡಿದರು.

ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಸಂಸದರು ಮತ್ತು ಶಾಸಕರು ಕಾಮಗಾರಿಯ ಗುಣಮಟ್ಟವನ್ನು ಕಾಪಾಡುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ದೂಡಾ ಅಧ್ಯಕ್ಷ ಎ.ವೈ.ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಏರ್ಪಾಡಾಗಿದ್ದ ಈ ಕಾರ್ಯಕ್ರಮದಲ್ಲಿ ದೂಡಾ ಸದಸ್ಯರುಗಳಾದ ಮಾರುತಿರಾವ್ ಘಾಟ್ಕೆ, ಲಕ್ಷ್ಮಣ್, ಬಾತಿ ಚಂದ್ರಶೇಖರ್, ಗೌರಮ್ಮ ವಿ.ಪಾಟೀಲ್, ದೂಡಾ ಮಾಜಿ ಅಧ್ಯಕ್ಷ ಕೆ.ಎಂ.ಸುರೇಶ್ ನಗರ ಪಾಲಿಕೆ ಸದಸ್ಯ ಕೆ.ಎಂ.ವೀರೇಶ್ ಮತ್ತಿತರರು ಭಾಗವಹಿಸಿದ್ದರು.

ದೂಡಾ ಆಯುಕ್ತ ಬಸವನಗೌಡ ಕೊಟೂರು, ಅಭಿಯಂತರುಗಳಾದ ಸುಜಯ್‌ಕುಮಾರ್‌, ಶ್ರೀಕರ್‌, ಅಕ್ಷತಾ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!