ನಕಲಿ ಬೇಡ ಜಂಗಮ ಪ್ರಮಾಣ ಪತ್ರ ಕ್ರಮಕ್ಕೆ ಒತ್ತಾಯಿಸಿ 14 ರಂದು ಧರಣಿ

ದಾವಣಗೆರೆ, ಮಾ.7-  `ಬೇಡ ಜಂಗಮ’ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ರಾಜಕಾರಣದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುವವರ ವಿರುದ್ಧ ಜಿಲ್ಲಾಡಳಿತ ಒಂದು ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಇದೇ ದಿನಾಂಕ 13ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಿರಂತರ ಧರಣಿ ಸತ್ಯಾಗ್ರಹ ನಡೆಸುವುದಾಗಿ ಪರಿಶಿಷ್ಟ ಜಾತಿಗಳ ರಕ್ಷಣಾ ವೇದಿಕೆ ಸಂಚಾಲಕ ಹೆಚ್.ಮಲ್ಲೇಶ್ ತಿಳಿಸಿದ್ದಾರೆ.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಯಕೊಂಡ ಕ್ಷೇತ್ರದಲ್ಲಿ ವಾಗೀಶ್ ಸ್ವಾಮಿ ಅವರು ಬೇಡ ಜಂಗಮ ಎಂದು ನಕಲಿ ಜಾತಿ ಪ್ರಮಾಣ ಪತ್ರ ಮಾಡಿಸಿಕೊಂಡು ರಾಜಕಾರಣ ಮಾಡಲು ಹೊರಟಿದ್ದು, ಕ್ಷೇತ್ರದ ಸಂಸದರು, ಶಾಸಕರುಗಳು ಈ ಬಗ್ಗೆ ಕ್ರಮ ಕೈಗೊಂಡು ಪರಿಶಿಷ್ಟ ಜಾತಿ, ವರ್ಗಗಳ ಸಮುದಾಯದವರ ಹಿತ ಕಾಪಾಡಬೇಕು ಎಂದು ಹೇಳಿದರು.

ಚಿನ್ನಸಮುದ್ರದ ಶೇಖರನಾಯ್ಕ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮಶೇಖರಪ್ಪ, ಲಕ್ಷ್ಮಣ್ ರಾಮಾವತ್, ವೆಂಕಟೇಶ್ ಬಾಬು, ಸಂದೇಶ್, ಜಿ.ಎನ್. ಮಲ್ಲಿಕಾರ್ಜುನ್ ಇತರರು ಉಪಸ್ಥಿತರಿದ್ದರು. 

error: Content is protected !!