ನಿವೇಶನ ಹಂಚಿಕೆಯಲ್ಲಿ ಶೇ. 5 ರಷ್ಟು ಮೀಸಲಾತಿ

ದಾವಣಗೆರೆ,  ಮಾ.7- ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ನಿಯಮದ ಪ್ರಕಾರ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ತಿದ್ದುಪಡಿ ಕೈಗೊಳ್ಳಲಾಗಿದೆ. ಕೇಂದ್ರ ಸಶಸ್ತ್ರ ಪಡೆಯ ಸೇವಾ ನಿರತ  ಸೈನಿಕರು, ಮಾಜಿ ಸೈನಿಕರು, ಮೃತ ಮಾಜಿ ಸೈನಿಕರ ಪತ್ನಿ ಮತ್ತು ಸೇವೆಯಲ್ಲಿರುವಾಗ ಮರಣ ಹೊಂದಿರುವ ಯೋಧರ ಅವಲಂಬಿತರಿಗೆ ಶೇ. 5 ರಷ್ಟು ನಗರಾಭಿವೃದ್ಧಿ ಪ್ರಾಧಿಕಾರಗಳ ನಿವೇಶನ ಹಂಚಿಕೆಯಲ್ಲಿ ಮೀಸಲಾತಿ ನೀಡಲಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!