ಜಗಳೂರಿನಲ್ಲಿ ನಾಳೆ `ಪ್ರಜಾಧ್ವನಿ’

ಜಗಳೂರಿನಲ್ಲಿ ನಾಳೆ `ಪ್ರಜಾಧ್ವನಿ’

ಕಾರ್ಯಕ್ರಮ ಯಶಸ್ವಿಗೆ ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಕರೆ

ಜಗಳೂರು, ಮಾ. 8-  ಪಟ್ಟಣದಲ್ಲಿ ಮಾರ್ಚ್ 10 ರಂದು     ನಡೆಯಲಿರುವ `ಪ್ರಜಾಧ್ವನಿ’  ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದು,   ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಅಧಿಕ  ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ಕರೆ ನೀಡಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಕರೆದಿದ್ದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು,  ರಾಜ್ಯದಲ್ಲಿ ಎರಡು ಭಾಗಗಳಾಗಿ ವಿಂಗಡಿಸಿ, ಪ್ರಜಾಧ್ವನಿ ಜನಜಾಗೃತಿ ಕಾರ್ಯಕ್ರಮ ಅಭಿಯಾನ ನಡೆಸಲಾಗುತ್ತಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕಲ್ಲಿ ಮಾಜಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ನೇತೃತ್ವ ವಹಿಸಿದ್ದಾರೆ.

ಪ್ರಜಾಧ್ವನಿ ಕಾರ್ಯಕ್ರಮದ ಮುಖ್ಯ ಉದ್ದೇಶ ಕಾಂಗ್ರೆಸ್ ಆಡಳಿತಾವಧಿಯಲ್ಲಿನ ಜನಪರ ಯೋಜನೆಗಳನ್ನು ಹಾಗೂ ಗ್ಯಾರಂಟಿ ಯೋ ಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವುದು ಮತ್ತು ಬಿಜೆಪಿ ದುರಾಡಳಿತ, ಪರ್ಸಂಟೇಜ್ ರಾಜಕಾರಣವನ್ನು ಮತದಾರರಿಗೆ ಮನವರಿಕೆ ಮಾಡಿ, ಪ್ರಜೆಗಳ ಧ್ವನಿಯನ್ನು ಎತ್ತಿಹಿಡಿಯುವುದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್,   ಮಾಜಿ ಸಚಿವರಾದ  ಜಮೀರ್ ಅಹಮ್ಮದ್,  ಎಚ್.ಆಂಜನೇಯ, ಎಸ್.ಎಸ್.ಮಲ್ಲಿಕಾರ್ಜುನ್, ಎಂ.ಬಿ.ಪಾಟೀಲ್, ಬಸವರಾಜ್ ರಾಯರೆಡ್ಡಿ ಸೇರಿದಂತೆ ಅನೇಕ ನಾಯಕರುಗಳು ಭಾಗವಹಿಸಲಿದ್ದು, ವಿಧಾನ ಸಭಾ ಕ್ಷೇತ್ರದಿಂದ ಸುಮಾರು 15ರಿಂದ 20 ಸಾವಿರ ಕಾರ್ಯಕರ್ತರು ಸೇರಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ತಾಲ್ಲೂಕು ಉಸ್ತುವಾರಿ ಕಲ್ಲೇಶ್ ರಾಜ್ ಪಟೇಲ್, ಕೆಪಿಸಿಸಿ ಎಸ್ಟಿ ಘಟಕದ ಅಧ್ಯಕ್ಷ ಕೆ.ಪಿ.ಪಾಲಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್,  ಮುಖಂಡರಾದ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ, ತಿಪ್ಪೇಸ್ವಾಮಿ ಗೌಡ್ರು, ಪಲ್ಲಾಗಟ್ಟೆ ಶೇಖರಪ್ಪ, ಯುಜಿ ಶಿವಕುಮಾರ್, ಬಿದರಕೆರೆ ವೀರೇಶ್, ವೆಂಕಟೇಶ್, ಗಿರೀಶ್ ಒಡೆಯರ್, ವಿಜಯ್ ಕೆಂಚೋಳ್  ಮತ್ತಿತರರಿದ್ದರು.

error: Content is protected !!