ಬಿಜೆಪಿ ಟಿಕೆಟ್‍ಗಾಗಿ ಮಾಜಿ ಶಾಸಕ ಡಾ.ಡಿ.ಬಿ. ಗಂಗಪ್ಪ ಸತತ ಪ್ರಯತ್ನ

ಬಿಜೆಪಿ ಟಿಕೆಟ್‍ಗಾಗಿ ಮಾಜಿ ಶಾಸಕ ಡಾ.ಡಿ.ಬಿ. ಗಂಗಪ್ಪ ಸತತ ಪ್ರಯತ್ನ

ಹೊನ್ನಾಳಿ, ಮಾ. 8 – ಮುಂದಿನ 2023 ನೇ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‍ಗಾಗಿ ಸತತ ಪ್ರಯತ್ನ ನಡೆಸುತ್ತಿದ್ದೇನೆ, ನಮ್ಮ ಪಕ್ಷ ನನಗೆ ಅವಕಾಶ ಕೊಟ್ಟರೆ ಅವಳಿ ತಾಲ್ಲೂಕಿನಾದ್ಯಂತ ಅತೀ ಹೆಚ್ಚು ಮತ ಪಡೆದು ಗೆದ್ದು ಬರುತ್ತೇನೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಡಾ.ಡಿ.ಬಿ. ಗಂಗಪ್ಪ ವಿಶ್ವಾಸ ವ್ಯಕ್ತಪಡಿಸದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯ ಮಟ್ಟದ ವರಿಷ್ಠರನ್ನು ಭೇಟಿ ಮಾಡಿ ಪಕ್ಷದಿಂದ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇನೆ, ಪಕ್ಷದಿಂದ ಟಿಕೆಟ್ ನೀಡಿದರೆ ಸ್ಪರ್ಧೆ ಮಾಡುತ್ತೇನೆ, ಇಲ್ಲದಿದ್ದರೆ ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೋ ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳದೆ ಈಗ ದಿಢೀರ್ ಎಂದು ಟಿಕೆಟ್ ಕೇಳಿದರೆ ಪಕ್ಷ ಟಿಕೆಟ್ ನೀಡುತ್ತಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಕಾರ್ಯಕ್ರಮಗಳಿಗೆ ನಮಗೆ ಆಹ್ವಾನ ಇರುತ್ತಿರಲಿಲ್ಲ, ಆದರೂ ನಾವು ರಾಜ್ಯಮಟ್ಟದ ಕಾರ್ಯಕ್ರಮ ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಬಿಜೆಪಿ ನಾಯಕರು ಬಂದರೆ ನಾವೂ ಸಹ ಉಪಸ್ಥಿತರಿರುತ್ತಿದ್ದೆವು ಎಂದು ಅವರು ಉತ್ತರಿಸಿದರು.

ಸತ್ತಿಗೆ ಲೋಕೇಶ್, ನರೇಂದ್ರ ಕಂಬಳ್ಳಿ, ಅರಬಗಟ್ಟೆ ರಮೇಶ್, ಕೋಮೇಶಪ್ಪ, ರಾಜಪ್ಪ, ರವೀಂದ್ರ, ಸಿದ್ದಪ್ಪ ಹಾಗೂ ಇತರರು ಇದ್ದರು.

error: Content is protected !!