ದಾವಣಗೆರೆ, ಏ.3- ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ದಾವಣಗೆರೆ ದಕ್ಷಿಣ ಹಾಗೂ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ಶಾಮನೂರು ಶಿವಶಂಕರಪ್ಪ ಹಾಗೂ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಸೋಮವಾರ ಚುನಾವಣಾ ಪ್ರಚಾರ ಆರಂಭಿಸಿದರು.
ಸಮೀಪದ ಆನೆಕೊಂಡದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಶಾಮನೂರು ಶಿವಶಂಕರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.
ಶಿವಶಂಕರಪ್ಪನವರು ಅವರ ಪುತ್ರ ಮಲ್ಲಿಕಾರ್ಜುನ್, ಸೊಸೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರೊಂದಿಗೆ ಆನೆಕೊಂಡದ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಆಗಮಿಸಿ, ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಶ್ರೀ ಬಸವೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಅಧಿಕೃತವಾಗಿ ಚುನಾವಣಾ ಪ್ರಚಾರ ಕೈಗೊಂಡರು.
ಅಲ್ಪಸಂಖ್ಯಾತರಲ್ಲಿ ಅಸಮಾಧಾನವಿಲ್ಲ: ಎಸ್ಸೆಸ್
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಅಸಮಾಧಾನಗೊಂಡಿದ್ದಾರೆ ಎಂಬುದು ಸತ್ಯಕ್ಕೆ ದೂರ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.
ಚುನಾವಣಾ ಪ್ರಚಾರದ ವೇಳೆ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ತಮಗೆ ಟಿಕೆಟ್ ದೊರೆತಿರುವುದರಿಂದ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರೂ ನಮ್ಮ ಜೊತೆಗಿದ್ದಾರೆ. ದಕ್ಷಿಣದಲ್ಲಿ ಮುಸ್ಲಿಮರ ಬೆಂಬಲ ಇದೆ. ಅಸಮಾಧಾನಗೊಂಡಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದರು.
ಎಲ್ಲೆಡೆ ಕಾಂಗ್ರೆಸ್ ಪರ ಅಲೆ ಇದೆ. ನನಗೆ ಪ್ರತಿಸ್ಪರ್ಧಿಯೇ ಇಲ್ಲ. ಜನರ ಬೆಂಬಲ, ಆಶೀರ್ವಾದ ನಮ್ಮ ಮೇಲಿದೆ. ನಮ್ಮ ವಿರುದ್ಧ ಹಿಂದೆ ಸ್ಪರ್ಧಿಸಿದ್ದವರು ಸೋತಿದ್ದಾರೆ. ಈ ಬಾರಿಯು ಅದೇ ಫಲಿತಾಂಶ ಬರಲಿದ್ದು, ಚುನಾವಣೆಯಲ್ಲಿ ಗೆಲುವು ಖಚಿತ ಎಂದು ಹೇಳಿದರು.
ಅಲ್ಪಸಂಖ್ಯಾತರಲ್ಲಿ ಅಸಮಾಧಾನವಿಲ್ಲ: ಎಸ್ಸೆಸ್
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಅಸಮಾಧಾನಗೊಂಡಿದ್ದಾರೆ ಎಂಬುದು ಸತ್ಯಕ್ಕೆ ದೂರ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.
ಚುನಾವಣಾ ಪ್ರಚಾರದ ವೇಳೆ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ತಮಗೆ ಟಿಕೆಟ್ ದೊರೆತಿರುವುದರಿಂದ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರೂ ನಮ್ಮ ಜೊತೆಗಿದ್ದಾರೆ. ದಕ್ಷಿಣದಲ್ಲಿ ಮುಸ್ಲಿಮರ ಬೆಂಬಲ ಇದೆ. ಅಸಮಾಧಾನಗೊಂಡಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದರು.
ಎಲ್ಲೆಡೆ ಕಾಂಗ್ರೆಸ್ ಪರ ಅಲೆ ಇದೆ. ನನಗೆ ಪ್ರತಿಸ್ಪರ್ಧಿಯೇ ಇಲ್ಲ. ಜನರ ಬೆಂಬಲ, ಆಶೀರ್ವಾದ ನಮ್ಮ ಮೇಲಿದೆ. ನಮ್ಮ ವಿರುದ್ಧ ಹಿಂದೆ ಸ್ಪರ್ಧಿಸಿದ್ದವರು ಸೋತಿದ್ದಾರೆ. ಈ ಬಾರಿಯು ಅದೇ ಫಲಿತಾಂಶ ಬರಲಿದ್ದು, ಚುನಾವಣೆಯಲ್ಲಿ ಗೆಲುವು ಖಚಿತ ಎಂದು ಹೇಳಿದರು.
ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರೆ, ಡೊಳ್ಳು ಕುಣಿತ ತಂಡವು ಪ್ರಚಾರದ ಮೆರವಣಿಗೆಗೆ ವಿಶೇಷ ಮೆರಗು ನೀಡಿದರು. ಶಾಮನೂರು ಶಿವಶಂಕರಪ್ಪ ಅವರು ವಾಹನದಲ್ಲಿ ಪಕ್ಷದ ಕಾರ್ಯಕರ್ತ ರೊಂದಿಗೆ ಕುಳಿತು ಮತ ಯಾಚಿಸಿದರು.
ನಂತರ ಪುತ್ರ ಎಸ್ಸೆಸ್ಸೆಂ ಪತ್ನಿಯೊಂದಿಗೆ ಶಾಮನೂರಿನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ಈಶ್ವರ ದೇಗುಲದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಚುನಾವಣಾ ಪ್ರಚಾರ ಆರಂಭಿಸಿದರು.
ಇದಕ್ಕೂ ಮುನ್ನ ಎಸ್ಸೆಸ್ಸೆಂ ಅವರು ಶಾಮನೂರಿಗೆ ಆಗಮಿಸುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಜಮಾಯಿಸಿ ಜೈಕಾರ ಹಾಕಿದರು. ಕಾರ್ಯಕರ್ತರು ಪಟಾಕಿ ಸಿಡಿಸಿದರು. ಮಲ್ಲಿಕಾರ್ಜುನ್ ಅವರು ದೇವಸ್ಥಾನಕ್ಕೆ ಬರುತ್ತಿದ್ದಂತೆ ನೂಕು ನುಗ್ಗಲು ಉಂಟಾಯಿತು. ಕೆಲವರು ಅವರಿಗೆ ಹೂವಿನ ಹಾರ ಹಾಕುವ ಮೂಲಕ ಬರಮಾಡಿಕೊಂಡರು.