ದಾವಣಗೆರೆ, ಏ.3- ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಯೋಧರೊಬ್ಬರು ಗುಂಡು ಹಾರಿಸಿಕೊಂಡು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲ್ಲೂಕಿನ ಹದಡಿ ಗ್ರಾಮದ ನಾಗರಾಜು (32) ಆತ್ಮಹತ್ಯೆ ಮಾಡಿಕೊಂಡವರು. ಪಂಜಾಬ್-ಹರಿಯಾಣ ಸೆಕ್ರೆಟರಿಯೇಟ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಭಾನುವಾರ ಬೆಳಗಿನ ಜಾವ 4.30ರ ಸುಮಾರಿಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಂಡೀಗಢದಲ್ಲಿರುವ ಪಂಜಾಬ್– ಹರಿಯಾಣ ಸೆಕ್ರೆಟರಿಯೇಟ್ನಲ್ಲಿ ನಾಗರಾಜು ಅವರು 6 ವರ್ಷಗಳ ಹಿಂದೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು.
ನಾಗರಾಜು ಹದಡಿಯ ಹನುಮಮ್ಮ ಅವರ ಪುತ್ರ. ಮೂರು ವರ್ಷಗಳ ಹಿಂದೆ ದಾವಣಗೆರೆಯ ಶಿಲ್ಪಾ ಅವರನ್ನು ವಿವಾಹವಾಗಿದ್ದು, ಇಬ್ಬರು ಪುತ್ರಿಯರು ಇದ್ದಾರೆ.