ಆರ್‌ಟಿಐ ಕಾರ್ಯಕರ್ತ ಟಿ. ಶ್ರೀಧರ್ ಕೊಲೆ

ಹರಪನಹಳ್ಳಿ, ಜು.15- ಇಲ್ಲಿಯ  ಆರ್‌ಟಿಐ ಕಾರ್ಯಕರ್ತ ಟಿ.ಶ್ರೀಧರ (40) ಅವರನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಪಟ್ಟಣದಲ್ಲಿ  ನಿನ್ನೆ ಜರುಗಿದೆ.

ಇಲ್ಲಿನ ಎಡಿಬಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿರುವ ಕ್ಯಾಂಟೀನ್ ಬಳಿ ಕುಳಿತಿದ್ದಾಗ ಯಾರೋ ದುಷ್ಕರ್ಮಿಗಳು ದಿಢೀರೆಂದು ಆಗಮಿಸಿ ರಾಡಿನಿಂದ ತಲೆಗೆ ಹೊಡೆದು ಪರಾರಿಯಾಗಿದ್ದಾರೆಂದು ಹೇಳಲಾಗಿದೆ.

ಶ್ರೀಧರ್ ಅವರನ್ನು ಕೂಡಲೇ ಆಂಬುಲೆನ್ಸ್‌ನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಂದಾಗ ಸಾವನ್ನಪ್ಪಿರುವುದು ಗೊತ್ತಾಗಿದೆ. ಹರಪನಹಳ್ಳಿ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಡಿವೈಎಸ್ಪಿ ಹಾಲಮೂರ್ತಿ ರಾವ್, ಸಿಪಿಐ ನಾಗರಾಜ ಕಮ್ಮಾರ, ವಿವಿಧ ಠಾಣೆಗಳ ಪಿಎಸ್‌ಐಗಳು, ಸಿಬ್ಬಂದಿ ವರ್ಗ ಆಸ್ಪತ್ರೆ ಸುತ್ತಮುತ್ತ ಬಂದೋಬಸ್ತ್ ಮಾಡಿದ್ದಾರೆ.

error: Content is protected !!