ರೈಲ್ವೇ ನಿಲ್ದಾಣದ ಬಳಿ ನೇಣಿಗೆ ಶರಣು

ಹರಿಹರ, ಏ.26- ನಗರದ ರೈಲ್ವೇ ನಿಲ್ದಾಣದ ಬಳಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ತಡ ರಾತ್ರಿ ನೇಣು ಹಾಕಿಕೊಂಡು ಮೃತಪಟ್ಟಿದ್ದು, ಬೆಳಗ್ಗೆ ರೈಲ್ವೆ ಸಿಬ್ಬಂದಿಗಳು ಕಾರ್ಯನಿರ್ವಹಿಸುವಾಗ ನೋಡಿ, ರೈಲ್ವೆ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ತಪಾಸಣೆ ಮಾಡಿ ವ್ಯಕ್ತಿಯ ದೇಹವನ್ನು ದಾವಣಗೆರೆ ಶವಾಗಾರಕ್ಕೆ ರವಾನಿಸಿದ್ದಾರೆ. 

ವ್ಯಕ್ತಿ ಕುರಿತು ಮಾಹಿತಿ ತಿಳಿದು ಬಂದಿರುವುದಿಲ್ಲ.  ಸ್ಥಳಕ್ಕೆ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್, ಔಟ್ ಪುಟ್ ಪೊಲೀಸ್ ಠಾಣೆಯ ಎಎಸ್ಐ ಬಸವರಾಜ್ ಭೇಟಿ ನೀಡಿದ್ದರು.

error: Content is protected !!