ಲಾರಿ-ಬೈಕ್‌ ಡಿಕ್ಕಿ: ಸವಾರ ಸಾವು

ದಾವಣಗೆರೆ, ಮಾ.2- ಮಿನಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ವಾಹನ ಸವಾರನೋರ್ವ ಮೃತಪಟ್ಟಿರುವ ಘಟನೆ ಇಲ್ಲಿನ ದಕ್ಷಿಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹರಿಹರದ ಅಂಬೇಡ್ಕರ್ ನಗರದ ಚೌಡಪ್ಪ ಅಲಿಯಾಸ್ ಮಂಜುನಾಥ (19) ಮೃತನು. ಈತ ಸೋಮವಾರ ಸಂಜೆ ತನ್ನ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನವನ್ನು ಚಾಲನೆ ಮಾಡುತ್ತಾ ಹರಿಹರದ ಕಡೆಯಿಂದ ದಾವಣಗೆರೆ ಕಡೆಗೆ ರಸ್ತೆಯ ಬದಿಯಲ್ಲಿ ಚಲಾಯಿಸಿಕೊಂಡು ಬರುತ್ತಿರುವಾಗ ದೈವಿಕ್ ಮೋತಿ & ರಾಮರಾವ್ ನಗರದ ಮುಂಭಾಗದ ಎನ್ ಹೆಚ್-48 ರಸ್ತೆಯಲ್ಲಿ ಮಿನಿ ಲಾರಿ ಡಿಕ್ಕಿ ಹೊಡೆದು ಈತನ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ.

error: Content is protected !!