ಹೊರಗುತ್ತಿಗೆ ನೌಕರ ಆತ್ಮಹತ್ಯೆ

ದಾವಣಗೆರೆ, ಮೇ 4- ಮಾನಸಿಕ ಖಿನ್ನತೆಗೆ ಸೂಕ್ತ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಜಗಳೂರು ತಾಲ್ಲೂಕು ಲಿಂಗಣ್ಣನಹಳ್ಳಿಯ ಸಮಾಜ ಕಲ್ಯಾಣ ಇಲಾಖೆ ಹೊರಗುತ್ತಿಗೆ ನೌಕರ ತಿಮ್ಮಣ್ಣ (46) ಎಂಬಾತ ಮನೆಯ ಚಾವಣಿಗೆ ನೇಣು ಬಿಗಿದುಕೊಂಡಿದ್ದಾರೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪತ್ನಿ ಗಿರಿಜಮ್ಮ ಪ್ರಕರಣ ದಾಖಲಿಸಿದ್ದಾರೆ.

ಗಾಂಧಿನಗರ : ಜಂಪೇನಹಳ್ಳಿಯ ರುದ್ರಾನಾಯ್ಕ ಭಾನುವಾರ ಮನೆಯಿಂದ ಹೊರ ಹೋದವರು ನಾಪತ್ತೆಯಾಗಿದ್ದರು. ದಾವಣಗೆರೆಯ ಅಶೋಕ ನಗರದ ದೊಡ್ಡ ಬೂದಿಹಾಳ್ ರಸ್ತೆಯಲ್ಲಿ ಜಾಲಿ ಗಿಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೊಟ್ಟೆ ನೋವು ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ರ ಮಂಜುನಾಥ್‌ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

error: Content is protected !!