ತುಂಗಭದ್ರಾ ನದಿಯಲ್ಲಿ ತೆಪ್ಪದ ಮೂಲಕ ಮರಳು ಲೂಟಿ

ತುಂಗಭದ್ರಾ ನದಿಯಲ್ಲಿ ತೆಪ್ಪದ ಮೂಲಕ ಮರಳು ಲೂಟಿ - Janathavaniಹೂವಿನಹಡಗಲಿ, ಮಾ.14- ತಾಲ್ಲೂಕಿನ ಗುತ್ತಲ ಸೇತುವೆಯ ಬಳಿ ತುಂಗಭದ್ರಾ ನದಿಯಲ್ಲಿ ಅವ್ಯಾಹತವಾಗಿ ಮರಳು ಲೂಟಿ ಹಾಡುಹಗಲೇ ನಡೆಯುತ್ತಿದ್ದರೂ, ಅಧಿಕಾರಿಗಳು ಗಮನಹರಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿದೆ. ರಾತ್ರಿ ಕೂಡ ಮರಳನ್ನು ಸಾಗಿಸುತ್ತಿದ್ದ ಅಧಿಕಾರಿಗಳು ಮಾತ್ರ ಮೌನ ವಹಿಸಿದ್ದಾರೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಅಕ್ರಮ ದಂಧೆಗೆ ಕಡಿವಾಣ ಹಾಕಬೇಕಾಗಿದೆ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

error: Content is protected !!