ಸೂಳೆಕೆರೆ ಗುಡ್ಡದಲ್ಲಿ ಯುವಕನ ಕೊಲೆ

ದಾವಣಗೆರೆ, ಜು.11- ದುಡ್ಡಿನ ವಿಚಾರದ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ಚನ್ನಗಿರಿ ತಾಲ್ಲೂಕಿನ ಸೂಳೆಕೆರೆ ಗುಡ್ಡದಲ್ಲಿ ನಡೆದಿದೆ.

ದಾವಣಗೆರೆ ತಾಲ್ಲೂಕಿನ ನಾಗರಕಟ್ಟೆಯ ಕೆ. ಚಂದ್ರನಾಯ್ಕ (25) ಕೊಲೆಯಾದ ಯುವಕ. 

ಈತ ಹೊಳಲ್ಕೆರೆಯಲ್ಲಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ತನ್ನ ಸ್ನೇಹಿತರಿಗೆ ಸಾಲ ನೀಡಿದ್ದ. ಅದನ್ನು ವಾಪಸ್ ನೀಡುವಂತೆ ಕೇಳಿದ್ದು, ಹಣ ಕೊಡುವುದಾಗಿ ಹೇಳಿ ಆತನನ್ನು ಸ್ನೇಹಿತರು ಸೂಳೆಕೆರೆಯಗುಡ್ಡದ ಬಳಿ  ನಿನ್ನೆ ರಾತ್ರಿ ಕರೆದುಕೊಂಡು ಹೋಗಿ ಹತ್ಯೆಗೈದಿರುವುದಾಗಿ ಶಂಕಿಸಿ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಕೊಲೆಗೀಡಾದ ಯುವಕನ ಪೋಷಕರು ದೂರು ನೀಡಿದ್ದಾರೆ.

ಸ್ಥಳಕ್ಕೆ ಚನ್ನಗಿರಿ ಡಿವೈಎಸ್‍ಪಿ ಪ್ರಶಾಂತ್ ಮುನೋಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

error: Content is protected !!