ಬಾಡಿಗೆ ಕಾರು ಚಾಲಕ ಆತ್ಮಹತ್ಯೆ

ದಾವಣಗೆರೆ, ಜು.20- ಬಾಡಿಗೆ ಕಾರು ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಜೇಂದ್ರ ಬಡಾವಣೆಯಲ್ಲಿ ನಡೆದಿದೆ. ಶ್ರೀಧರ್ (35) ಮೃತ ಚಾಲಕ.    ಮನೆಯ ಮೇಲಿನ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!