ಜಗಳೂರಿನ ಇಓ ಕಾರು ಅಪಘಾತ; ಅಪಾಯದಿಂದ ಪಾರು

ಜಗಳೂರು, ಆ.18- ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವ ಹಣಾಧಿಕಾರಿ ಮಲ್ಲನಾಯ್ಕ ಅವರ ಬುಲೇರೊ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿರುವ ಘಟನೆ ಜಗಳೂರು ತಾಲ್ಲೂಕಿನ ರಸ್ತೆಮಾಚಿಕೆರೆ ಗ್ರಾಮದ ಸಮೀಪ ನಿನ್ನೆ ನಡೆದಿದೆ.

ಜಗಳೂರಿನಿಂದ ದಾವಣಗೆರೆ ಕಡೆಗೆ ಹೊಗುತ್ತಿದ್ದ ವೇಳೆ ಆಕ್ಸಲ್ ಕಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಘಟನೆ ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು ಮಾರ್ಗ ಮಧ್ಯದಲ್ಲಿ  ತೆರೆಳುತಿದ್ದ  ಶಾಸಕ ಎಸ್.ವಿ. ರಾಮಚಂದ್ರ, ಗಾಯಳುಗಳಿಗೆ ಸಾಂತ್ವನ ಹೇಳಿದರು. ಆಸ್ಪತ್ರೆಗೆ ದಾಖಲಿಸಲು ನೆರವಾದರು.

error: Content is protected !!