ಅನುತ್ತೀರ್ಣ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ದಾವಣಗೆರೆ, ಆ.18 – ಪರೀಕ್ಷೆಯಲ್ಲಿ ಅನುತ್ತೀರ್ಣ ಹಿನ್ನೆಲೆಯಲ್ಲಿ ಮನನೊಂದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕೆರೆಯೊಂದರಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ‌ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಸರಸ್ವತಿ ಬಡಾವಣೆಯ ಸೃಷ್ಠಿ (21) ಮೃತ ವಿದ್ಯಾರ್ಥಿನಿ. ಬಿಐಇಟಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಈ ವಿದ್ಯಾರ್ಥಿನಿಯು ತೃತೀಯ ಮತ್ತು ನಾಲ್ಕನೇ ಸೆಮಿಸ್ಟರ್‍ನಲ್ಲಿ ಅನುತ್ತೀರ್ಣರಾಗಿದ್ದು, ಪುನಃ ಪರೀಕ್ಷೆ ಬರೆದರೂ ಉತ್ತೀರ್ಣವಾಗದ ಕಾರಣ ಮನನೊಂದಿದ್ದಳು ಎನ್ನಲಾಗಿದೆ.

ಪ್ರತಿದಿನದಂತೆ ಇಂದು ಮುಂಜಾನೆ ತನ್ನ ದ್ವಿಚಕ್ರ ವಾಹನದಲ್ಲಿ ಮನೆಯಿಂದ ವಾಯುವಿಹಾರಕ್ಕೆಂದು ಕೆರೆಯತ್ತ ಬಂದು ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

error: Content is protected !!