ಸರ್ಕಾರಿ ನೌಕರರ ಕ್ರೀಡಾಕೂಟ ಮಾಲತೇಶ ತಳವಾರ್ ರಾಜ್ಯಮಟ್ಟಕ್ಕೆ

ಹರಪನಹಳ್ಳಿ, ಫೆ. 15- ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ (ಬಳ್ಳಾರಿ) ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಮೊನ್ನೆ ನಡೆದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಮತ್ತು ವೇಟ್ ಲಿಫ್ಟಿಂಗ್ ಹಾಗೂ  ಕುಸ್ತಿ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದುಕೊಳ್ಳುವ ಮೂಲಕ ಸಮಾಜ ಕಲ್ಶಾಣ ಇಲಾಖೆಯ ಸಿಬ್ಬಂದಿ ಮಾಲತೇಶ ತಳವಾರ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ರಾಜ್ಶಮಟ್ಟದಲ್ಲಿ ಬಳ್ಳಾರಿ ಜಿಲ್ಲೆಯನ್ನು ಪ್ರತಿನಿಧಿಸಿ ವಿಜೇತರಾಗಲಿ ಎಂದು  ಉಪನಿರ್ದೇಶಕ ರಾಜಪ್ಪ, ಸಹಾಯಕ ನಿರ್ದೇಶಕ ಆನಂದ ಡೊಳ್ಳಿನ, ಇಲಾಖೆಯ ಸಿಬ್ಬಂದಿ, ಸ್ನೇಹಿತರು ಅಭಿನಂದಿಸಿದ್ದಾರೆ.

error: Content is protected !!